Friday, June 27, 2025

ಬಂಟ್ವಾಳ: ಸಂಚಾರ ನಿಯಮ ಉಲ್ಲಂಘಿಸಿದ ಸವಾರ- ಟ್ರಾಫಿಕ್ ಎಎಸ್ಸೈ ನಡುವೆ ಜಟಾಪಟಿ

ಬಂಟ್ವಾಳ: ಟ್ರಾಫಿಕ್ ಪೊಲೀಸರೊಬ್ಬರು ಸಂಚಾರ ನಿಯಮ ಉಲ್ಲಂಘನೆ  ಆರೋಪದಡಿ ವಾಹನ ಸವಾರೊಬ್ಬರ ನಡುವಿನ ಮಾತಿನಚಕಮಕಿ ಹಾಗೂ ಎಳೆದಾಡಿದ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪೊಲೀಸರ ಈ ನಡೆಗೆ ಸವಾರರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೀಡಿಯೋದಲ್ಲಿ ತುಣುಕು ಮೆಲ್ಕಾರ್ ಜಂಕ್ಷನ್ ಸಮೀಪದ ಗುಡ್ಡೆಯಂಗಡಿ ರಸ್ತೆಯಲ್ಲಿ ಇಂದು ನಡೆದಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮೆಲ್ಕಾರ್ ಟ್ರಾಫಿಕ್ ಠಾಣೆಯ ಎಎಸ್ಸೈ ಹಾಗೂ ಸಂಚಾರ ಉಲ್ಲಂಘನೆ  ಮಾಡಿದ ಸವಾರನ ನಡುವೆ ವಾಗ್ವಾದ ಉಂಟಾಗಿದೆ ಎನ್ನಲಾಗಿದ್ದು, ಬಳಿಕ ಎಸ್ಸೈ ಅವರು ಸವಾರನೋರ್ವನ ಬಟ್ಟೆ ಹಿಡಿದು ಎಳೆದಾಡಿದ  ಸನ್ನಿವೇಶವನ್ನು ಇನ್ನೋರ್ವ ಸವಾರ ಮೊಬೈಲ್ ಮೂಲಕ ಚಲನಚಿತ್ರ ಚಿತ್ರೀಕರಿಸಿದ್ದಾರೆ‌. ಪೊಲೀಸರ ಈ ದುರ್ವತನೆಗೆ ಆಕ್ರೋಶ ವ್ಯಕ್ತಪಡಿಸಿ, ವಿವಿಧ ಬರಹಗಳೊಂದಿಗೆ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಘಟನೆಯ ಬಗ್ಗೆಗಿನ ಸ್ಪಷ್ಟ ಮಾಹಿತಿ ಪೊಲೀಸರಿಂದ ನಿರೀಕ್ಷಿಸಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...