Wednesday, February 12, 2025

ಝಿರೋ ಟ್ರಾಫಿಕ್ ಗೆ ನೆರವಾದ ಜಿಲ್ಲೆಯ ಜನತೆಗೆ ಪೋಲೀಸರಿಂದ ಧನ್ಯವಾದ

ಬಂಟ್ವಾಳ: ಝಿರೋ ಟ್ರಾಫಿಕ್ ಗೆ ನೆರವಾದ ಜಿಲ್ಲೆಯ ಜನತೆಗೆ ಪೋಲೀಸರು ಧನ್ಯವಾದ ಹೇಳಿದ್ದಾರೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ೪೦ ದಿನಗಳ ಸೈಫುಲ್ ಅಝ್ಮಾನ್ ಎಂಬ ಮಗುವನ್ನು ಗುರುವಾರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಬೇಕಿತ್ತು.
ಆದರೆ ಮಂಗಳೂರಿನಿಂದ ಬೆಂಗಳೂರುವೆರಗೂ ಜನರು ಉತ್ತಮ ಸಹಕಾರ ನೀಡಿದ್ದಾರೆ, ಎಂದು ಪೋಲೀಸರು ತಿಳಿಸಿದ್ದಾರೆ.
ಫರಂಗಿಪೇಟೆಯಿಂದ ಉಪ್ಪಿನಂಗಡಿವರೆಗೆ ಆ್ಯಂಬುಲೆನ್ಸ್ ಸಾಗುವುದಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ನೆರವಾಗಿದ್ದಾರೆ.
ಬಂಟ್ವಾಳ ಸಂಚಾರಿ ಪಿಎಸ್ಐ ರಾಮ ನಾಯ್ಕ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬಂದಿ ಅಧಿಕ ವಾಹನದೊತ್ತಡ ಇರುವ ಫರಂಗಿಪೇಟೆ, ಕೈಕಂಬ, ಬಿ.ಸಿ.ರೋಡು, ಮೆಲ್ಕಾರ್, ಕಲ್ಲಡ್ಕ, ಮಾಣಿ ಪ್ರದೇಶದಲ್ಲಿ ಆ್ಯಂಬುಲೆನ್ಸ್ ಸಾಗುವುದಕ್ಕೆ ಸಹಕರಿಸಿದ್ದಾರೆ.
ಒಟ್ಟು 18 ಟ್ರಾಫಿಕ್ ಪೋಲೀಸರು, ನಗರ ,ಗ್ರಾಮಾಂತರ ಪೋಲಿಸರ ಜೊತೆ ಗೃಹರಕ್ಷಕದಳ ಹಾಗೂ ಸಾರ್ವಜನಿಕರು ಕೂಡ ಪೊಲೀಸರಿಗೆ ನೆರವಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.
ಕೇವಲ ಸಾಮಾಜಿಕ ಜಾಲತಾಣದ ಸಂದೇಶಗಳ ಮೂಲಕ ಅತೀ ಹೆಚ್ಚಿನ ಸಹಕಾರ ದೊರೆತಿದೆ ಎಂದು ಅವರು ಹೇಳಿದ್ದಾರೆ

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...