Wednesday, February 4, 2026

ಪಿ ಡಿ ಎ ಉಪಕರಣಗಳನ್ನು ಹಿಂಪಡೆದಿರುವುದಾಗಿ ಎಂಬುದು ಸುಳ್ಳು ಸುದ್ದಿ : ಜಂಟಿ ಪೋಲೀಸ್ ಆಯುಕ್ತ ರವಿಕಾಂತೇ ಗೌಡ

ಬೆಂಗಳೂರು: ಸಂಚಾರ ಪೋಲೀಸರು ನಿಯಮ ಜಾರಿ ಮಾಡಲು ಉಪಯೋಗಿಸುವ ಪಿ.ಡಿ.ಎ ಉಪಕರಣಗಳನ್ನು ವಾಪಸ್ ಪಡೆದಿದ್ದಾರೆ, ಜೊತೆಗೆ ಸಂಚಾರ ನಿಯಮ ಉಲ್ಲಂಘನೆ ದಾಖಲಿಸಬಾರದು ಎಂಬುದು ಸುಳ್ಳು ಸುದ್ದಿ ಎಂದು ಬೆಂಗಳೂರು ಸಂಚಾರ ಜಂಟಿ ಆಯುಕ್ತ ಡಾ! ಬಿ.ಆರ್.ರವಿಕಾಂತೇ ಗೌಡ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಂಚಾರ ಪೊಲೀಸರು ನಿಯಮ ಜಾರಿ ಮಾಡಲು ಉಪಯೋಗಿಸುವ ಪಿ ಡಿ ಎ ಉಪಕರಣಗಳನ್ನು ವಾಪಸ್ಸು ಪಡೆದಿರುವುದಾಗಿ ಮತ್ತು ಯಾವುದೇ ಸಂಚಾರ ನಿಯಮ ಉಲ್ಲಂಘನೆಗಳನ್ನು ದಾಖಲಿಸ ಬಾರದಾಗಿ ತಿಳಿಸಿರುತ್ತಾರೆಂದು ಸುದ್ದಿ ಬರುತ್ತಿದೆ.
ಇಂತಹ ಯಾವುದೇ ಸೂಚನೆಯನ್ನು ನೀಡಿರುವುದಿಲ್ಲ. ಹಾಗೂ ಪಿ ಡಿ ಎ ಗಳನ್ನು ವಾಪಸ್ಸು ಪಡೆದಿರುವುದಿಲ್ಲ. ಜಂಟಿ ಪೊಲೀಸ್ ಆಯುಕ್ತರು, ಸಂಚಾರ ರವರು ಪಿಡಿ ಎ ಗಳನ್ನು ವಾಪಸ್ಸು ಪಡೆದಿರುವ ಬಗ್ಗೆ ಹೇಳಿಕೆ ನೀಡಿರುತ್ತಾರೆಂದು ಕೆಲವು ಮಾಧ್ಯಮಗಳು ಪ್ರತಿಬಿಂಬಿಸಿ ಪ್ರಚಾರ ಮಾಡುತ್ತಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಈ ವಿಚಾರದ ಬಗ್ಗೆ ಜಂಟಿ ಪೊಲೀಸ್ ಆಯುಕ್ತರು, ಸಂಚಾರ ರವರನ್ನು ಯಾವ ಮಾಧ್ಯಮದ ಪ್ರತಿನಿಧಿಯೂ ಸಂಪರ್ಕಿಸಿ ರುವುದಿಲ್ಲ. ಕೆಲವು ಪ್ರಚಾರ ವಾಗುತ್ತಿರುವ ಈ ವಿಚಾರಗಳು ಸಂಪೂರ್ಣ ಸುಳ್ಳು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...