Wednesday, February 12, 2025

ಟ್ರಾಫಿಕ್ ಪೋಲೀಸರ ಟ್ರಕ್ಕಿಂಗ್

ಬಂಟ್ವಾಳ: ಯಾವಾಗಲೂ ಖಾಕಿ ತೊಟ್ಟು ಕೈಯಲ್ಲಿ ಬೆತ್ತ ಹಿಡಿದು ಸೀಟಿ ಊದಿ ಟ್ರಾಫಿಕ್ ಕಿರಿಕಿರಿಯನ್ನು ಸರಿ ಮಾಡುತ್ತಿದ್ದ ಪೋಲೀಸರು ಇದೇನಪ್ಪ ರಸ್ತೆಯಲ್ಲಿ ವಾಕಿಂಗ್ ಹೊರಟಿದ್ದಾರೆ , ಬಿಳಿ ಟೀ ಶರ್ಟ್ ಖಾಕಿ ಪ್ಯಾಂಟ್ ಹಾಕಿ ಕೊಂಡು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಟ್ರಾಫಿಕ್ ಠಾಣೆಯಿಂದ ಟ್ರಾಫಿಕ್ ಪೋಲೀಸ್ ಠಾಣೆ ಯ ಎಲ್ಲಾ ಸಿಬ್ಬಂದಿ ಗಳು ಸಾಲಾಗಿ ರಸ್ತೆಯಲ್ಲಿ ಶಿಸ್ತು ಬದ್ದವಾಗಿ ನಡೆದುಕೊಂಡು ಹೋಗುವಾಗ ಎಲ್ಲರ ಚಿತ್ತ ಅವರ ಮೇಲೆಯೇ ಇತ್ತು.

ಇವರು ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಿಂದ ನೇರವಾಗಿ ವಾಕಿಂಗ್ ಮೂಲಕ ತೆರಳಿದ್ದು ನರಹರಿ ಸದಾಶಿವ ದೇವಸ್ಥಾನ ಕ್ಕೆ.

ದಿನದ 24 ಗಂಟೆಯೂ ಕೆಲಸದ ಒತ್ತಡದ ಮಧ್ಯೆ ಆರೋಗ್ಯದ ಕಡೆಗೆ ಗಮನ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪೋಲೀಸರು ವಾರದಲ್ಲಿ ಒಮ್ಮೆಯಾದರೂ ಟ್ರಕ್ಕಿಂಗ್ , ವಾಕಿಂಗ್ , ಯೋಗ , ಹೀಗೆ ಬೇರೆ ಬೇರೆ ರೀತಿಯಲ್ಲಿ ಪೋಲೀಸರ ನ್ನು ತೊಡಗಿಸಿಕೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಮೀಪ್ರಸಾದ್ ಅವರು ತಿಳಿಸಿದ್ದಾರೆ ಯಂತೆ .

ಹಾಗಾಗಿ ಇಂದಿನಿಂದ ಈ ವಿನೂತನ ರೀತಿಯ ಯೋಜನೆಗೆ ಚಾಲನೆ ನೀಡಿದ್ದಾರೆ.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರ ಅದೇಶದಂತೆ
ಪೋಲೀಸರ ಮನಸ್ಸಿನ ಒತ್ತಡ ಕಡಿಮೆ ಮಾಡಲು ನಾನು ಮತ್ತು ನನ್ನ ತಂಡದೊಂದಿಗೆ ಟ್ರಕ್ಕಿಂಗ್ ಹೋಗುತ್ತಿದ್ದೇನೆ ಎಂದು ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮಂಜುನಾಥ್ ತಿಳಿಸಿದ್ದಾರೆ. ‌

ಎಸ.ಪಿ.ಯವರ ಹೊಸ ಪ್ರಯತ್ನ ವಾಗಿದ್ದು ಪ್ರತಿ ವಾರ ಯೋಗ ಹೀಗೆ ವಿಭಿನ್ನ ರೀತಿಯ ಕಾರ್ಯಕ್ರಮ ಗಳ ಮೂಲಕ ಪೋಲೀಸರ ಮಾನಸಿಕ ,ದೈಹಿಕ , ಬೌದ್ಧಿಕ ಮಟ್ಟವನ್ನು ಉತ್ತಮ ಪಡಿಸುವುದು ಯೋಚನೆಯಾಗಿದೆ.
ಇಂದು ನರಹರಿ ಶ್ರೀ ಸದಾಶಿವ ದೇವಸ್ಥಾನ ಕ್ಕೆ ಟ್ರೆಕ್ಕಿಂಗ್ ಮೂಲಕ ಸಾಗಿ ದೇವರ ದರ್ಶನ ಪಡೆದು ಎಸ್.ಪಿ.ಯವರ ಯೋಚನೆಗೆ ನಾವು ಮೂಹೂರ್ತ ಮಾಡುತ್ತೇವೆ ಎಂದು ಅವರು ಹೇಳಿದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...