Friday, June 27, 2025

*ಟ್ರೀ ಬೈಕ್ ಆವಿಷ್ಕಾರಕ್ಕೆ ಪ್ರತಿಷ್ಠಾ ವರ್ಲ್ಡ್ ರೆಕಾರ್ಡ್ ಗೌರವ ಪಡೆದ ಗಣಪತಿ ಭಟ್*

ಬಂಟ್ವಾಳ: ರಾಜ್ಯಮಟ್ಟದ ಸೂಪರ್ ಸ್ಟಾರ್ ರೈತ ಪುರಸ್ಕಾರ ಪಡೆದ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕೋಮಾಲಿಯ ಪ್ರಗತಿಪರ ಕೃಷಿಕ ಗಣಪತಿ ಭಟ್ ಅವರು ಕೃಷಿ ಕಾರ್ಮಿಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 2019 ರಲ್ಲಿ ಇಂಧನ ಚಾಲಿತ ದೇಶೀಯ ಟ್ರೀ ಬೈಕ್ ಆವಿಷ್ಕರಿಸಿದ್ದರು. ಸುಧಾರಿತ ವಿಧಾನದ ಈ ಬೈಕ್ ಕಡಿಮೆ ಅವಧಿಯಲ್ಲಿ ರೈತರ ಗಮನ ಸೆಳೆದಿರುವುದಲ್ಲದೇ ದೇಶ-ವಿದೇಶಗಳಲ್ಲೂ ಜನಪ್ರಿಯತೆ ಪಡೆದು ಬೇಡಿಕೆ ಸೃಷ್ಟಿಸಿತು. ದಿ ಹಿಸ್ಟರಿ ಚಾನೆಲ್ನಲ್ಲೂ ಪ್ರಕಟಗೊಂಡಿತ್ತು. ಇದೀಗ ಪ್ರತಿಷ್ಠಾ ಎಂಬ ಸಂಸ್ಥೆ ನೀಡುವ ಪ್ರತಿಷ್ಠಾ ವರ್ಲ್ಡ್ ರೆಕಾರ್ಡ್ ಗೌರವಕ್ಕೆ ಗಣಪತಿ ಭಟ್ ಪಾತ್ರರಾಗಿದ್ದಾರೆ.

ಅತಿವೇಗದಲ್ಲಿ ಮರವೇರುವ ಹಾಗೂ ಅಡಕೆ ಕೃಷಿಕರಿಗೆ ನೆರವಾಗುವ ಈ ಬೈಕ್ ಅನ್ನು ಗಣಪತಿ ಭಟ್ ಆವಿಷ್ಕರಿಸಿದ ವೇಳೆ ಮಹೀಂದ್ರಾ ಕಂಪನಿಯ ಮಾಲೀಕರೇ ಟ್ವಿಟ್ಟರ್ ನಲ್ಲಿ ಈ ಕಾರ್ಯವನ್ನು ಶ್ಲಾಘಿಸಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಪ್ರಗತಿಪರ ರೈತರಾಗಿರುವ ಗಣಪತಿ ಭಟ್, ವಿವಿಧೆಡೆ ಈ ಯಂತ್ರದ ಕುರಿತು ಉಪನ್ಯಾಸಗಳನ್ನು ನೀಡುತ್ತಿದ್ದು, ಆಸಕ್ತ ರೈತರಿಗೆ ಪ್ರಾತ್ಯಕ್ಷಿಕೆಯನ್ನೂ ನೀಡುತ್ತಾರೆ. ಟ್ರೀ ಬೈಕ್ ಗೆ ಉತ್ತಮ ಸ್ಪಂದನೆಯೂ ದೊರಕಿದ್ದು, ಬಹುಬೇಡಿಕೆಯೂ ಇದೆ ಎಂದು ಗಣಪತಿ ಭಟ್ ಹೇಳಿದ್ದಾರೆ. ಭಟ್ ಪುತ್ರಿ ಸುಪ್ರಿಯಾ ಅಡಕೆ ಮರವೇರುವ ದೃಶ್ಯಾಗಳಿಗಳು 2019ರಲ್ಲಿ ವೈರಲ್ ಆಗಿದ್ದವು. ಇತ್ತೀಚೆಗೆ ಐಪಿಎಲ್ ಗೆ ಶುಭ ಕೋರುವ ಜಾಹೀರಾತಿನಲ್ಲೂ ಭಟ್ ಪಾಲ್ಗೊಂಡು ಗಮನ ಸೆಳೆದಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...