Monday, January 26, 2026

ತುಡರ್ ಸೇವಾ ಟ್ರಸ್ಟ್(ರಿ.) ಪ್ರಥಮ ವರ್ಷದ ವಾರ್ಷಿಕೋತ್ಸವ

ಬಂಟ್ವಾಳ: ಕತ್ತಲೆ ಅವರಿಸಿದ್ದನ್ನು ಒಂದು ಚಿಕ್ಕ ದೀಪದಿಂದ ಬೆಳಕನ್ನು ಮೂಡಿಸಬಹುದು ಅದೇ ರೀತಿ ಸಮಾಜದ ಅಶಕ್ತರ ಬಾಳಿನ ಅಂಧಕಾರವನ್ನು ಹೋಗಲಾಡಿಸಿ ಬೆಳಕನ್ನು ಮೂಡಿಸುವ ಸಲುವಾಗಿ ಬಂಟ್ವಾಳದ ಅಮ್ಟಾಡಿಯ ಹಳ್ಳಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ತುಡರ್ ಸೇವಾ ಟ್ರಸ್ಟ್(ರಿ.) ಅನ್ನುವ ಸಂಸ್ಥೆಯು ಹುಟ್ಟುಕೊಂಡಿತ್ತು ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಅ.20ನೇ ಆದಿತ್ಯವಾರ ಬಂಟ್ವಾಳ ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ವೇದಿಕೆಯಲಿ ಕಾರ್ಕಳದ ವಿಜೇತ ವಿಶೇಷ ಶಾಲೆಯ ಸ್ಥಾಪಕಿ ಡಾ| ಕಾಂತಿ ಹರೀಶ್, ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಅಧ್ಯಕ್ಷರಾದ ನವೀನ್ ಪಿ ಮಿಜಾರ್, ಪ್ರತಾಪ್ ಭಾರದ್ವಾಜ್, ಹರೀಶ್ ಶೆಟ್ಟಿ ಪಡ್ರೆ ಮತ್ತು ತುಡರ್ ಸೇವಾ ಟ್ರಸ್ಟ್(ರಿ.) ಗೌರವಾಧ್ಯಕ್ಷ ತಿಲಕ್ ಪೂಜಾರಿ ಪಡೀಲ್, ನಿಶ್ಚಿತ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಸಮಾಜದ ಆಯ್ದ ಅಶಕ್ತರಾದ ಸುರೇಶ್ ಜೋಡುಕಲ್ಲು, ಅಶ್ವಿತ ಗುರುಪುರ, ರಮಿತ್ ಕೂರಿಯಾಳ ಮತ್ತು ಆನಂದ ಪೂಜಾರಿ ಇವರಿಗೆ ಆರ್ಥಿಕ ಸಹಾಯ ಹಾಗೂ ಕಾರ್ಕಳದ ಪರಪ್ಪುನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜೇತ ವಿಶೇಷ ಮಕ್ಕಳ ಶಾಲೆಗೆ ದೇಣಿಗೆ, ಸಾಧಕರಾದ ಡಾ| ಕಾಂತಿ ಹರೀಶ್, ನವೀನ್ ಪಿ ಮಿಜಾರು, ಹರೀಶ್ ಶೆಟ್ಟಿ ಪಡ್ರೆ ಇವರುಗಳು ಗೌರವಿಸಿ ಸನ್ಮಾನಿಸಲಾಯಿತು ಜೊತೆಗೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ವತ್ರೆ ಮಂಗಳೂರು ಇದರ ಆಶ್ರಯದಲ್ಲಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಡಾ| ಪಿ ದಯಾನಂದ ಪೈ ಮತ್ತು ಪಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್(ರಿ.) ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಇದರ ಸದುಪಯೋಗವನ್ನು ಊರ ಮತ್ತು ಪರವೂರ ನಾಗರಿಕರು ಪಡೆದುಕೊಂಡರು. ಒಂದೊಳ್ಳೆ ಸಾಮಾಜಿಕ ಚಿಂತನೆಯ ಕಾರ್ಯಕ್ರಮಕ್ಕೆ ಸಾಕ್ಷಿಯಾದರು ತುಡರ್ ಸೇವಾ ಟ್ರಸ್ಟ್(ರಿ.)

✒ ನೀತು ಪೂಜಾರಿ ಅಜಿಲಮೊಗರು

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...