Sunday, January 25, 2026

ಬಂಟ್ವಾಳ ತಾ.ತುಳುಕೂಟದ ಅಧ್ಯಕ್ಷರಾಗಿ ಸುದರ್ಶನ್ ಜೈನ್ ಪುನರಾಯ್ಕೆ‌

ಬಂಟ್ವಾಳ: ಬಂಟ್ವಾಳ ತಾಲೂಕು ತುಳು ಕೂಟ ಅಧ್ಯಕ್ಷರಾಗಿ ಮುಂದಿನ ಎರಡು ವರ್ಷದ ಅವಧಿಗೆ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್ ಪುನರಾಯ್ಕೆ ಆಗಿದ್ದಾರೆ.
ಬಿ.ಸಿ.ರೋಡ್ ನಲ್ಲಿ ಬುಧವಾರ ನಡೆದ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅವರನ್ನು ಕೂಟದ ಗೌರವಾಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು.
ನೂತನ  ಕಾರ್ಯದರ್ಶಿಯಾಗಿ ಎಚ್ಕೆ ನಯನಾಡು, ಕೋಶಾಧಿಕಾರಿ ಕೆ.ಸುಭಾಶ್ಚಂದ್ರ ಜೈನ್ ಆಯ್ಕೆಗೊಂಡರು. ಪ್ರಧಾನ ಸಲಹೆಗಾರರಾಗಿ ಡಿ.ಎಂ. ಕುಲಾಲ್, ಮಂಜು ವಿಟ್ಲ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಮೇಶ್ ನಾಕ್ ರಾಯಿ,  ಸರಪಾಡಿ ಅಶೋಕ ಶೆಟ್ಟಿ,  ಶಾರದಾ ಬಂಗೇರ, ಜೊತೆಕಾರ್ಯದರ್ಶಿ ಸೇಸಪ್ಪ ಮಾಸ್ಟರ್, ಸದಾಶಿವ ಪುತ್ರನ್,  ಸಂಘಟನಾ ಕಾರ್ಯದರ್ಶಿಗಳಾಗಿ  ಸೀತಾರಾಮ ಶೆಟ್ಟಿ, ದಿವಾಕರ ದಾಸ್, ಪ್ರಭಾಕರ ಪ್ರಭು,  ರಾಧಾಕೃಷ್ಣ ರೈ,  ಕ್ರೀಡಾ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ  ಮೋಹನ್‌ದಾಸ್ ಕೊಟ್ಟಾರಿ, ಸದಸ್ಯರಾಗಿ  ಮುರಳೀಧರ ಶೆಟ್ಟಿ,   ಪರಮೇಶ್ವರ ಎಂ.,  ಮನೋಜ್ ಆಳ್ವ,  ಮಹಾಬರ ರೈ ಬರ್ಕೆಗುತ್ತು,  ಚಂದ್ರಶೇಖರ ಗಟ್ಟಿ, ದೇವಪ್ಪ ಕುಲಾಲ್, ಸದಾನಂದ ಶೆಟ್ಟಿ ಪಂಜಿಕಲ್ಲು,  ಮಧುಸೂದನ ಶೆಣೈ,  ಮುತ್ತಪ್ಪ ಪೂಚಾರಿ ಚಂಡ್ತಿಮಾರ್,  ವಾಸು ಮಾಸ್ಟರ್,  ದಿನೇಶ್ ಶೆಟ್ಟಿ, ಗಣೇಶ್ ನಾಕ್, ಸತೀಶ್ ಕುಮಾರ್ ಕಾರ್ತಿಕ್ ಸ್ಟುಡಿಯೊ ಆಯ್ಕೆಯಾಗಿದ್ದಾರೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...