Saturday, January 31, 2026

ತುಳು ನಾಟಕ ಸ್ವರ್ಧೆಯ ಫಲಿತಾಂಶ ಪ್ರಕಟ : ಇನಿಮುಟ್ಟ ಇಂಚಾತಿಜಿ ಪ್ರಥಮ, ‘ಅರ್ಗಂಟ್’ ದ್ವಿತೀಯ

ಬಂಟ್ವಾಳ: ಬಿ.ಸಿ.ರೋಡಿನ ಗೋಲ್ಡನ್ ಮೈದಾನದ ಕರಾವಳಿ ಕಲೋತ್ಸವ-2021 ರ ಡಾ.ಎ.ಪಿ.ಜೆ ಕಲಾಂ ವೇದಿಕೆಯಲ್ಲಿ ನಡೆದ ನಾಟಕೋತ್ಸವದಲ್ಲಿ ತುಳು ನಾಟಕ ಸ್ವರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಯಿಲ‌ ತೆಲಿಕೆದ ಕಲಾವಿದೆರ್ ತಂಡದ ‘ ಇನಿಮುಟ್ಟ ಇಂಚಾತಿಜಿ ‘ನಾಟಕ ಪ್ರಥಮ ಬಹುಮಾನವನ್ನು‌ ಪಡೆದುಕೊಂಡಿದೆ.

ತಾಂಬೂಲ ಕಲಾವಿದೆರ್, ಪುಂಜಾಲಕಟ್ಟೆ ‘ಅರ್ಗಂಟ್’ ದ್ವಿತೀಯ ಹಾಗೂ ಕಡೆಗೋಳಿ ರಂಗಧರಣಿ ಕಲಾವಿದೆರ್, ತಂಡ ‘ ಗುರು’ ತೃತೀಯ ಸ್ಥಾನ ಪಡೆದಿದೆ.

ಉತ್ತಮ ನಿರ್ದೇಶನ ಸುರೇಶ್ ಕುಲಾಲ್ ಪ್ರಥಮ, ರಾಘವೇಂದ್ರ ಕಾರಂತ್ ದ್ವಿತೀಯ ಸ್ಥಾನ ಪಡೆದುಕೊಂಡರೆ,ಉತ್ತಮನಟನಾಗಿ ತೆಲಿಕೆದ ಕಲಾವಿದೆರ್ ತಂಡದ ಸತೀಶ್ ಕಜೆಕಾರ್, ನಾವೂರು ಕಲಾನಿಧಿ ಕಲಾವಿದರೆ ತಂಡದ ವಿನೋದ್‌ರಾಜ್ ಹಳೆಗೇಟು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಉತ್ತಮ ನಟಿಯಾಗಿ ರಂಗಧರಣಿ ಕಲಾವಿದರು ತಂಡದ ಸುರಕ್ಷಾ ಮುಡಿಪು ಪ್ರಥಮ ಹಾಗೂ ತಾಂಬೂಲ ಕಲಾವಿದೆರ್ ತಂಡದ – ಉಷಾ ದೇವರಾಜ್ ದ್ವಿತೀಯ ಸ್ಥಾನಗಳಿಸಿದ್ದಾರೆ.ಉತ್ತಮ ಹಾಸ್ಯನಟ: ಕಲಾನಿಧಿ ಕಲಾವಿದರು ತಂಡದ ಪ್ರಥ್ವಿನ್ ಪೊಳಲಿ ಪ್ರಥಮ ಹಾಗೂ ತಾಂಬೂಲ ಕಲಾವಿದೆರ್ ತಂಡದ ಸುರೇಶ್ ಕುದ್ಕೋಳಿ ದ್ವಿತೀಯ ಸ್ಥಾನಗಳಿಸಿದ್ದಾರೆ.

ಉತ್ತಮ ಹಾಸ್ಯನಟಿ: ಕಲಾನಿಧಿ‌ ಕಲಾವಿದರು ತಂಡದ ಸತೀಶ್, ನಾವೂರು ಪ್ರಥಮ ಹಾಗೂ ರಂಗಧರಣಿ ಕಲಾವಿದರು ತಂಡದ ಹರೀಶ್, ಆಲದಪದವು ದ್ವಿತೀಯ ಸ್ಥಾನ ಪಡೆದಿದ್ದಾರೆ.ಉತ್ತಮ ಪೋಷಕ ನಟನಾಗಿ

ತೆಲಿಕೆದ ಕಲಾವಿದೆರ್ ತಂಡದ ರಮಾ, ಬಿ.ಸಿ.ರೋಡು ಪ್ರಥಮ, ತಾಂಬೂಲ ಕಲಾವಿದೆರ್ ತಂಡದ ಡಿ.ಎಸ್.ಬೋಳೂರು ದ್ವಿತೀಯ ಸ್ಥಾನ ಪಡೆದಿದ್ದಾರೆ. .

ಉತ್ತಮ ಪೋಷಕ ನಟಿಯಾಗಿ ತಾಂಬೂಲ ಕಲಾವಿದೆರ್ ತಂಡದ ಸುರಕ್ಷಾ, ನೆಲ್ಲಿಗುಡ್ಡೆ ಪ್ರಥಮ ಹಾಗೂ ತೆಲಿಕೆದ ಕಲಾವಿದೆರ್ ತಂಡದ ಶ್ವೇತಾ ಆಳ್ವ, ದ್ವಿತೀಯ ಸ್ಥಾನ ಪಡೆದಿದ್ದಾರೆ.

ಉತ್ತಮ ಖಳನಟನಾಗಿ ರಂಗಧರಣಿ ಕಲಾವಿದರು ತಂಡದ ದಾಮೋದರ ಆಚಾರ್ಯ ವಗ್ಗ, ಪ್ರಥಮ ಹಾಗೂ ರಂಗಧರಣಿ ಕಲಾವಿದರು ತಂಡದ ರಾಕೇಶ್ ಶೆಟ್ಟಿ ಬಿ.ಸಿ.ರೋಡ್, ದ್ವಿತೀಯ ಸ್ಥಾನ ಪಡೆದಿದ್ದಾರೆ,

ಉತ್ತಮ ಖಳನಟಿಯಾಗಿ ಸತ್ಯದೇವತಾ ಕಲಾ ಆರ್ಟ್ಸ್, ಕನಪಾದೆ ತಂಡದ ಸುರೇಶ್ ಸರಪಾಡಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಉದ್ಯಮಿ,ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ ಅವರು ಆರೋಗ್ಯ ಪೂರ್ಣ ಚಿಂತನೆ,ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಸಂಸ್ಥೆ ಬೆಳಗುತ್ತದೆ ಎಂದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,ಯಕ್ಷಗಾನ ಆರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ,ಬಂಟ್ವಾಳ ನಗರ ಠಾಣೆಯ ಎಸ್ ಅವಿನಾಶ್ ,ಪ್ರೊಬೆಷನರಿ ಎಸ್ ಐ. ಕೃಷ್ಣಕಾಂತ್ ಸಂಸ್ಥೆಯ ಗೌರವಾಧ್ಯಕ್ಷ,ವಕೀಲರಾದ ಜಯರಾಮರೈ, ತೀಪುಗಾರರಾದ ರಮೇಶ್ ರೈ ಕುಕ್ಕುವಳ್ಳಿ, ಅರುಣ್ ಶೆಟ್ಟಿ ಪೇಜಾವರ,ಸುಧೀರ್ ರಾಜ್ ಉರ್ವ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆ ವಹಿಸಿದ್ದರು.ಇದೇ ವೇಳೆ ಕಲೋತ್ಸವದ ಯಶಸ್ವಿಗೆ ದುಡಿದವರನ್ನು,ನಾಟಕ ತೀರ್ಪುಗಾರರನ್ನು ಅಭಿನಂದಿಸಲಾಯಿತು. ಚಿಣ್ಣರಲೋಕ ಮೋಕೆದ ಕಲಾವಿದರ್ ಸೇವಾ ಟ್ರಸ್ಟ್ ಸ್ಥಾಪಕ ಮೋಹನದಾಸ್ ಕೊಟ್ಟಾರಿ ಪ್ರಸ್ತಾವನೆಗೈದರು. ಸೌಮ್ಯ ಯಶವಂತ್ ಭಂಡಾರಿಬೆಟ್ಟು ಸ್ವಾಗತಿಸಿದರು. ರತ್ನದೇವ್ ಪುಂಜಾಲಕಟ್ಟೆ ವಂದಿಸಿದರು. ಶೈಲಜಾರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...