Wednesday, February 12, 2025

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2019ನೇ ಸಾಲಿನ ಶೈಕ್ಷಣಿಕ ಸೇವಾ ಯೋಜನೆ

 

ಜೀವನದ ಪ್ರತಿ ಕ್ಷಣದಲ್ಲಿಯೂ ಸೇವೆ ಮಾಡುವ ಮನಸ್ಥಿತಿ ಎಲ್ಲರಿಗೂ ಬರಲು ಸಾಧ್ಯವಿಲ್ಲ ಅದಕ್ಕೊಂದು ಸೂಕ್ತ ವೇದಿಕೆ ಬೇಕು. ಮನೋಭಾವ ಮತ್ತು ವೇದಿಕೆ ಎರಡು ಉತ್ತಮವಾಗಿದ್ದಾಗ ಸೇವೆ ಮತ್ತು ತ್ಯಾಗ ಎಂಬ ಎರಡು ಧ್ಯೇಯಗಳನ್ನು ನಾವು ಬಿಡದಿದ್ದಾಗ ಮಾತ್ರ ನಿಸ್ವಾರ್ಥವಾದ ಮಹಾನ್ ಕಾರ್ಯಗಳು ನಮಗರಿವಿಲ್ಲದೆ ದೇವರ ದಯೆಯಿಂದ ನಮ್ಮಿಂದಲೇ ನಡೆದುಹೋಗುತ್ತದೆ. ಇಲ್ಲಿ ಹೇಳ ಹೊರಟಿರುವುದು ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಎಂಬ ಸಂಸ್ಥೆಯ 33ನೇ ತಿಂಗಳ ಸೇವಾ ಚಟುವಟಿಕೆಯು ಇತ್ತೀಚಿಗೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನಡುಮೊಗರು ದ.ಕ.ಜಿ.ಪಂ.ಹಿರಿಯ ಪ್ರಥಮಿಕ ಶಾಲೆಯಲ್ಲಿ 2019-2020ನೇ ಶಾಲಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಮತ್ತು ಶೈಕ್ಷಣಿಕ ಸೇವಾ ಯೋಜನೆಯಲ್ಲಿ ಗುರುತಿಸಲಾದ ಸಂಸ್ಥೆಯ ಸೇವಾ ಮನೋಬಾಂಧವರ ಇಬ್ಬರು ಮಕ್ಕಳ ಶಿಕ್ಷಣಕ್ಕೆ ರೂ.20,000 ಮತ್ತು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಮಂಗಳೂರು ತಾಲೂಕು ಗುರುಪುರ ಮುಳೂರು ನಡುಗುಡ್ಡೆ ದಿ| ಶೇಖರ್ ಪೂಜಾರಿಯವರ ಇಬ್ಬರ ಮಕ್ಕಳ ಶಿಕ್ಷಣಕ್ಕೆ ರೂ.20,000 ಚೆಕ್ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ನಡೆಯಿತು.


ಹಿರಿಯರು, ಮಾರ್ಗದರ್ಶಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಡುಮೊಗರು ಗುತ್ತು  ಶಿವರಾಮ ಶೆಟ್ಟಿಯವರು ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಸಂಸ್ಥೆಯ ಕಾರ್ಯ ವೈಖಿರಿಯ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅದo ಕುಂಞ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಾಹಸ ಶಂಕರಬೆಟ್ಟು, ಯುವಕ ಮಂಡಲ(ರಿ.) ನಡುಮೊಗರು ಉಪಾಧ್ಯಕ್ಷರಾದ ರಮೇಶ್ ಪೂಜಾರಿ ಡೆಚ್ಚಾರು, ಶ್ರೀ ರಾಮಾಂಜನೆಯ ಗೆಳೆಯರ ಬಳಗ(ರಿ.) ಮೈರ ಇದರ ಅಧ್ಯಕ್ಷರಾದ ಉಮೇಶ್ ಪೂಜಾರಿ ಮೈರ, ಪುರೋಹಿತರಾದ ನವೀನ್ ಶಾಂತಿ ಅಡ್ಯಾಲ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು, ಹಳೆ ವಿದ್ಯಾರ್ಥಿಗಳು, ಯುವಕ ಮಂಡಲ(ರಿ.) ಸದಸ್ಯರು, ಶ್ರೀ ರಾಮಾಂಜೆನೆ ಗೆಳೆಯರ ಬಳಗ(ರಿ.) ಸದಸ್ಯರು, ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನಿರ್ವಾಹಕರು ಮತ್ತು ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಭಾಗವಹಿಸಿದರು..ಶಾಲಾ ಮುಖ್ಯ ಶಿಕ್ಷಕ ಮಧುಸೂಧನ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರ ಕೆ ವಂದಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...