Friday, July 4, 2025

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2019ನೇ ಸಾಲಿನ ಶೈಕ್ಷಣಿಕ ಸೇವಾ ಯೋಜನೆ

 

ಜೀವನದ ಪ್ರತಿ ಕ್ಷಣದಲ್ಲಿಯೂ ಸೇವೆ ಮಾಡುವ ಮನಸ್ಥಿತಿ ಎಲ್ಲರಿಗೂ ಬರಲು ಸಾಧ್ಯವಿಲ್ಲ ಅದಕ್ಕೊಂದು ಸೂಕ್ತ ವೇದಿಕೆ ಬೇಕು. ಮನೋಭಾವ ಮತ್ತು ವೇದಿಕೆ ಎರಡು ಉತ್ತಮವಾಗಿದ್ದಾಗ ಸೇವೆ ಮತ್ತು ತ್ಯಾಗ ಎಂಬ ಎರಡು ಧ್ಯೇಯಗಳನ್ನು ನಾವು ಬಿಡದಿದ್ದಾಗ ಮಾತ್ರ ನಿಸ್ವಾರ್ಥವಾದ ಮಹಾನ್ ಕಾರ್ಯಗಳು ನಮಗರಿವಿಲ್ಲದೆ ದೇವರ ದಯೆಯಿಂದ ನಮ್ಮಿಂದಲೇ ನಡೆದುಹೋಗುತ್ತದೆ. ಇಲ್ಲಿ ಹೇಳ ಹೊರಟಿರುವುದು ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಎಂಬ ಸಂಸ್ಥೆಯ 33ನೇ ತಿಂಗಳ ಸೇವಾ ಚಟುವಟಿಕೆಯು ಇತ್ತೀಚಿಗೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನಡುಮೊಗರು ದ.ಕ.ಜಿ.ಪಂ.ಹಿರಿಯ ಪ್ರಥಮಿಕ ಶಾಲೆಯಲ್ಲಿ 2019-2020ನೇ ಶಾಲಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಮತ್ತು ಶೈಕ್ಷಣಿಕ ಸೇವಾ ಯೋಜನೆಯಲ್ಲಿ ಗುರುತಿಸಲಾದ ಸಂಸ್ಥೆಯ ಸೇವಾ ಮನೋಬಾಂಧವರ ಇಬ್ಬರು ಮಕ್ಕಳ ಶಿಕ್ಷಣಕ್ಕೆ ರೂ.20,000 ಮತ್ತು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಮಂಗಳೂರು ತಾಲೂಕು ಗುರುಪುರ ಮುಳೂರು ನಡುಗುಡ್ಡೆ ದಿ| ಶೇಖರ್ ಪೂಜಾರಿಯವರ ಇಬ್ಬರ ಮಕ್ಕಳ ಶಿಕ್ಷಣಕ್ಕೆ ರೂ.20,000 ಚೆಕ್ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ನಡೆಯಿತು.


ಹಿರಿಯರು, ಮಾರ್ಗದರ್ಶಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಡುಮೊಗರು ಗುತ್ತು  ಶಿವರಾಮ ಶೆಟ್ಟಿಯವರು ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಸಂಸ್ಥೆಯ ಕಾರ್ಯ ವೈಖಿರಿಯ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅದo ಕುಂಞ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಾಹಸ ಶಂಕರಬೆಟ್ಟು, ಯುವಕ ಮಂಡಲ(ರಿ.) ನಡುಮೊಗರು ಉಪಾಧ್ಯಕ್ಷರಾದ ರಮೇಶ್ ಪೂಜಾರಿ ಡೆಚ್ಚಾರು, ಶ್ರೀ ರಾಮಾಂಜನೆಯ ಗೆಳೆಯರ ಬಳಗ(ರಿ.) ಮೈರ ಇದರ ಅಧ್ಯಕ್ಷರಾದ ಉಮೇಶ್ ಪೂಜಾರಿ ಮೈರ, ಪುರೋಹಿತರಾದ ನವೀನ್ ಶಾಂತಿ ಅಡ್ಯಾಲ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು, ಹಳೆ ವಿದ್ಯಾರ್ಥಿಗಳು, ಯುವಕ ಮಂಡಲ(ರಿ.) ಸದಸ್ಯರು, ಶ್ರೀ ರಾಮಾಂಜೆನೆ ಗೆಳೆಯರ ಬಳಗ(ರಿ.) ಸದಸ್ಯರು, ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ನಿರ್ವಾಹಕರು ಮತ್ತು ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಭಾಗವಹಿಸಿದರು..ಶಾಲಾ ಮುಖ್ಯ ಶಿಕ್ಷಕ ಮಧುಸೂಧನ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರ ಕೆ ವಂದಿಸಿದರು.

More from the blog

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ : ನ್ಯಾಯಕ್ಕಾಗಿ ಡಿವೈಎಸ್ಪಿ ಗೆ ಮನವಿ..

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ದ.ಕ.ಜಿಲ್ಲಾಧಿಕಾರಿಗಳು, ಎಸ್ಪಿಯವರು ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಅವರ ಮೂಲಕ...

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ...

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...