Saturday, February 8, 2025

ಬಡ ಕುಟುಂಬದ ಹೆಣ್ಣಿನ ಕಂಕಣ ಭಾಗ್ಯಕ್ಕೆ ನೇರವಾಗಿ ಮಾನವೀಯತೆ ಮೆರೆದ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ)

ಬಂಟ್ವಾಳ ತಾಲೂಕಿನ ವಿಟ್ಲ ಗ್ರಾಮದ ಅನ್ನಮೂಲೆಯಲ್ಲಿ 5 ಸೆಂಟ್ಸ್ ಜಾಗದಲ್ಲಿ ಮನೆಯಲ್ಲಿ ಮೂರುಮಂದಿ ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ 47 ವರ್ಷದ ವಿಶ್ವನಾಥ ಪೂಜಾರಿಯವರು ಹಠಾತ್ ಆಗಿ ಕುಳಿತಲ್ಲಿಯೇ ಮೇಲೆಳಲೂ ಆಗದೆ ತನ್ನ ದೇಹದ ಬಲಹೀನತೆಯನ್ನು ಕಳೆದುಕೊಂಡರು. ಕಳೆದ 7 ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಇಬ್ಬರು ಹೆಣ್ಣುಮಕ್ಕಳ ಅಲ್ಪಸ್ವಲ್ಪ ದುಡಿಮೆಯಿಂದಲೇ ಕಷ್ಟದಲ್ಲೆ ಜೀವನ ಸಾಗಿಸುತ್ತಿದ್ದ ವಿಶ್ವನಾಥ ಪೂಜಾರಿಯವರ ಎರಡನೆಯ ಮಗಳ ಮದುವೆಯೂ ಇದೇ ಬರುವ ಡಿಸೆಂಬರ್ ತಿಂಗಳ 31ನೇ ಸೋಮವಾರದಂದು ನಡೆಯಲಿದೆ. ಹಿರಿಮಗಳಿಗೆ ಮದುವೆ ಮಾಡಿ ಇನ್ನೆನೂ ಸಾಲ ಮಾಡಿಯಾದರೂ ಎರಡನೆಯ ಮಗಳಾದ ಪ್ರತಿಭಾರವರ ಮದುವೆ ಮಾಡಬೇಕು ಅಂತ ಸಿದ್ದತೆಯ ಚಿಂತೆಯಲ್ಲಿ ಮಗ್ನರಾಗಿದ್ದ ವಿಶ್ವನಾಥ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿಯವರು ಹಠಾತ್ ಆಗಿ ಕಾಯಿಲೆಗೆ ಬಿದ್ದು ಮೇ ತಿಂಗಳಲ್ಲಿ ದೈವದೀನರಾದರು ಗಾಯದ ಮೇಲೆ ಬರೆ ಎಳೆದಂತೆ ಒಂದು ಕಡೆ ಮಗಳ ಮದುವೆಯ ಚಿಂತೆ ಇನ್ನೊಂದು ಕಡೆ ಮೊದಲ ಮಗಳ ಮದುವೆಗೆ ಮಾಡಿದ ಸಾಲದ ಸಂದಿಗ್ಧ ಪರಿಸ್ಥಿತಿಯಲ್ಲಿರುವ ವಿಶ್ವನಾಥ ಪೂಜಾರಿಯವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಿ.ಸಿ ರೋಡ್ ಇಲ್ಲಿ 25,000 ರೂಪಾಯಿಯ ಧನ ಸಹಾಯವನ್ನು ಮಗಳ ಮದುವೆಗೆ ನೆರವು ನೀಡಿ ಮಾನವೀಯತೆ ಮೆರೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...