Tuesday, July 1, 2025

ಬಡ ಕುಟುಂಬದ ಹೆಣ್ಣಿನ ಕಂಕಣ ಭಾಗ್ಯಕ್ಕೆ ನೇರವಾಗಿ ಮಾನವೀಯತೆ ಮೆರೆದ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ)

ಬಂಟ್ವಾಳ ತಾಲೂಕಿನ ವಿಟ್ಲ ಗ್ರಾಮದ ಅನ್ನಮೂಲೆಯಲ್ಲಿ 5 ಸೆಂಟ್ಸ್ ಜಾಗದಲ್ಲಿ ಮನೆಯಲ್ಲಿ ಮೂರುಮಂದಿ ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ 47 ವರ್ಷದ ವಿಶ್ವನಾಥ ಪೂಜಾರಿಯವರು ಹಠಾತ್ ಆಗಿ ಕುಳಿತಲ್ಲಿಯೇ ಮೇಲೆಳಲೂ ಆಗದೆ ತನ್ನ ದೇಹದ ಬಲಹೀನತೆಯನ್ನು ಕಳೆದುಕೊಂಡರು. ಕಳೆದ 7 ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಇಬ್ಬರು ಹೆಣ್ಣುಮಕ್ಕಳ ಅಲ್ಪಸ್ವಲ್ಪ ದುಡಿಮೆಯಿಂದಲೇ ಕಷ್ಟದಲ್ಲೆ ಜೀವನ ಸಾಗಿಸುತ್ತಿದ್ದ ವಿಶ್ವನಾಥ ಪೂಜಾರಿಯವರ ಎರಡನೆಯ ಮಗಳ ಮದುವೆಯೂ ಇದೇ ಬರುವ ಡಿಸೆಂಬರ್ ತಿಂಗಳ 31ನೇ ಸೋಮವಾರದಂದು ನಡೆಯಲಿದೆ. ಹಿರಿಮಗಳಿಗೆ ಮದುವೆ ಮಾಡಿ ಇನ್ನೆನೂ ಸಾಲ ಮಾಡಿಯಾದರೂ ಎರಡನೆಯ ಮಗಳಾದ ಪ್ರತಿಭಾರವರ ಮದುವೆ ಮಾಡಬೇಕು ಅಂತ ಸಿದ್ದತೆಯ ಚಿಂತೆಯಲ್ಲಿ ಮಗ್ನರಾಗಿದ್ದ ವಿಶ್ವನಾಥ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿಯವರು ಹಠಾತ್ ಆಗಿ ಕಾಯಿಲೆಗೆ ಬಿದ್ದು ಮೇ ತಿಂಗಳಲ್ಲಿ ದೈವದೀನರಾದರು ಗಾಯದ ಮೇಲೆ ಬರೆ ಎಳೆದಂತೆ ಒಂದು ಕಡೆ ಮಗಳ ಮದುವೆಯ ಚಿಂತೆ ಇನ್ನೊಂದು ಕಡೆ ಮೊದಲ ಮಗಳ ಮದುವೆಗೆ ಮಾಡಿದ ಸಾಲದ ಸಂದಿಗ್ಧ ಪರಿಸ್ಥಿತಿಯಲ್ಲಿರುವ ವಿಶ್ವನಾಥ ಪೂಜಾರಿಯವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಿ.ಸಿ ರೋಡ್ ಇಲ್ಲಿ 25,000 ರೂಪಾಯಿಯ ಧನ ಸಹಾಯವನ್ನು ಮಗಳ ಮದುವೆಗೆ ನೆರವು ನೀಡಿ ಮಾನವೀಯತೆ ಮೆರೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...