Friday, January 30, 2026

ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲ: ಹಲವಾರು ರಿಯಾಯಿತಿಗಳು

ಉಡುಪಿ: ಒಂದು ತಿಂಗಳಿನಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಇಲ್ಲದ ಹಿನ್ನೆಲೆ ಜಿಲ್ಲೆ ಹಸಿರು ವಲಯದಲ್ಲಿದೆ. ಇದರಿಂದಾಗಿ ಇಂದಿನಿಂದ ಕೆಲವೊಂದು ರಿಯಾಯಿತಿಗಳನ್ನು ನೀಡಿದ ಪರಿಣಾಮ ಜಿಲ್ಲೆಯಾದ್ಯಂತ ವಾಣಿಜ್ಯ ಚಟುವಟಿಕೆಗಳು ಚುರುಕುಗೊಂಡವು. ಈ ಮೂಲಕ ಜಿಲ್ಲೆಯ ಜನಜೀವನ ಸಹಜದತ್ತ ಮರಳುತ್ತಿದೆ. ಇಂದು ಬೆಳಗ್ಗೆಯಿಂದಲೇ ಉಡುಪಿ ನಗರ, ಕುಂದಾಪುರ, ಬ್ರಹ್ಮಾವರ, ಕಾಪು, ಪಡುಬಿದ್ರೆ, ಬೈಂದೂರು,
ಕಾರ್ಕಳ ಸೇರಿದಂತೆ ಜಿಲ್ಲೆಯ ಪ್ರಮುಖ ಪೇಟೆಗಳಲ್ಲಿ ಜನ ಹಾಗೂ ವಾಹನ ಸಂದಣಿ ಹೆಚ್ಚಾಗಿದ್ದವು. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧಗಳ ಸಡಿಲಿಕೆಯಿಂದ ರಾಷ್ಟ್ರೀಯ ಹೆದ್ದಾರಿ ಸಹಿತ ಜಿಲ್ಲೆಯ ಎಲ್ಲ ರಸ್ತೆಗಳಲ್ಲಿಯೂ ವಾಹನ ಸಂಚಾರ ಹಿಂದಿಗಿಂತ ಹೆಚ್ಚು ಕಂಡು ಬಂದಿದೆ. ಕಾರು, ಆಟೋ ರಿಕ್ಷಾ, ಲಾರಿ, ಟೆಂಪೋ, ದ್ವಿಚಕ್ರ ವಾಹನಗಳ ಓಡಾಟ ಎಂದಿನಂತೆಯೇ ಇದ್ದವು.
ಲಾಕ್ ಡೌನ್ ದಿನಗಳಲ್ಲಿ ದಿನಸಿ, ತರಕಾರಿ, ಬೇಕರಿ ಅಂಗಡಿಗಳು ಮಾತ್ರ ತೆರೆಯಲು ಅವಕಾಶ ಇದ್ದವು. ಆದರೆ ಇಂದಿನಿಂದ ಕೆಲವೊಂದು ಸಣ್ಣಪುಟ್ಟ ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ, ಜ್ಯೂಸ್, ಫ್ಯಾನ್ಸಿ ಅಂಗಡಿಗಳು, ಕಟ್ಟಡ ಕಾಮಗಾರಿಗೆ ಪೂರಕ ಸಾಮಗ್ರಿಗಳ ಹಾರ್ಡ್‌ವೇರ್, ಸಿಮೇಂಟ್, ಸಿರಮಿಕ್ಸ್ ಅಂಗಡಿಗಳು, ಗ್ಯಾರೇಜ್, ಪಂಚರ್ ಮತ್ತು ಟಯರ್ ಅಂಗಡಿಗಳು ವ್ಯಾಪಾರವನ್ನು ಆರಂಭಿಸಿದವು. ಆದರೆ ಗ್ರಾಹಕರು ಇಲ್ಲದ ಕಾರಣ ಬೆಳಗ್ಗೆ 11ರ ನಂತರ ಎಲ್ಲ ಅಂಗಡಿಗಳನ್ನು ಬಂದ್ ಮಾಡಿದರು. ಉಡುಪಿ ನಗರದ ಪ್ರಮುಖ ರಸ್ತೆಗಳು ಜನ ಹಾಗೂ ವಾಹನ ದಟ್ಟಣೆಯಿಂದ ಕೂಡಿದ್ದವು. ಕೆಲವು ಕಡೆಗಳಲ್ಲಿ ಸುರಕ್ಷಿತ ಅಂತರವನ್ನು ಗಾಳಿಗೆ ತೂರಲಾಗಿತ್ತು. ಹಲವು ಮಂದಿ ಮಾಸ್ಕ್ ಹಾಕದೆ ತಿರುಗುತ್ತಿರುವುದು ಕಂಡುಬಂತು. ಎಲ್ಲ ಕಡೆ ಪೊಲೀಸರು ಗಸ್ತು ತಿರುಗುತ್ತಿದ್ದು, ನಗರದ ಕಲ್ಸಂಕದಲ್ಲಿ ವಾಹನ ತಪಾಸಣೆಯನ್ನು ನಡೆಸುತ್ತಿದ್ದರು.

ಬೃಹತ್ ಬಟ್ಟೆ ಅಂಗಡಿಗಳು, ಚಪ್ಪಲ್ ಅಂಗಡಿಗಳು, ಎಲೆಕ್ಟ್ರಾನಿಕ್ಸ್ ಅಂಗಡಿಗಳು, ಮಾಲ್‌ಗಳು ಬಂದ್ ಆಗಿದ್ದವು. ಬಸ್ ಸಂಚಾರ ಇಲ್ಲದ ಪರಿಣಾಮ ಸಿಟಿ ಹಾಗೂ ಸರ್ವಿಸ್ ಬಸ್‌ ನಿಲ್ದಾಣಗಳು ಜನ ಸಂಚಾರವಿಲ್ಲದೆ ಎಂದಿನಂತೆಯೇ ಬೀಕೋ ಎನ್ನುತ್ತಿತ್ತು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...