Friday, July 11, 2025

ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ.ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‌ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‌ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ. ಅಧ್ಯಕ್ಷ ಪ್ರವೀಣ ಕುಮಾರ್‌ ಜೈನ್, ಚಿಂತನ್‌ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...