Tuesday, February 11, 2025

ಧರ್ಮಸ್ಥಳ: ಭರತನ ದಿಗ್ವಿಜಯ, ಅಯೋಧ್ಯೆ ಪ್ರವೇಶ ದ್ವಾರದಲ್ಲಿ ಚಕ್ರರತ್ನ ಸ್ಥಗಿತ

ಉಜಿರೆ: ಭರತ ಚಕ್ರರತ್ನ ಬಳಸಿ ದಿಗ್ವಿಜಯ ಕೈಗೊಂಡು ಷಟ್‌ಖಂಡಗಳನ್ನು ಗೆದ್ದು ಹಿಂದೆ ಬರುವಾಗ ವೃಷಭಾಚಲದಲ್ಲಿ ಶಾಸನ ಬರೆಸಲು ಪ್ರಯತ್ನಿಸುತ್ತಾನೆ. ಆದರೆ ಅಲ್ಲಿ ಈಗಾಗಲೆ ಚಕ್ರವರ್ತಿಗಳ ಹೆಸರು ಬರೆದಿದ್ದು ಈತನ ಹೆಸರು ಬರೆಯಲು ಜಾಗವಿರಲಿಲ್ಲ. ಲಿಪಿಕಾರನನ್ನು ಕರೆಸಿ ತನ್ನ ಹೆಸರು ಬರೆಸಲು ಹೇಳುತ್ತಾರೆ. ಆದರೆ ಅಲ್ಲಿ ಶಾಸನ ದೇವತೆಗಳು ಅದನ್ನು ತಡೆಯುತ್ತಾರೆ. ಆದರೂ ಇತರರ ಹೆಸರು ಅಳಿಸಿ ಭರತ ತನ್ನ ಹೆಸರನ್ನು ಬರೆಸುತ್ತಾನೆ.

ಮುಂದೆ ಅಯೋಧ್ಯೆ ಪ್ರವೇಶ ದ್ವಾರದಲ್ಲಿ ಚಕ್ರರತ್ನ ಸ್ಥಗಿತಗೊಳ್ಳುತ್ತದೆ. ಈ ಬಗ್ಗೆ ಜ್ಯೋತಿಷರಲ್ಲಿ ವಿಮರ್ಶೆ ಮಾಡಿದಾಗ, ತನ್ನ ಸಹೋದರರನ್ನು ಸೋಲಿಸಿಲ್ಲ. ಅವರನ್ನು ಗೆದ್ದರೆ ಮಾತ್ರ ಚಕ್ರವರ್ತಿ ಆಗಬಹುದು ಎಂದು ತಿಳಿದು ಬರುತ್ತದೆ. ಸಹೋದರರು ಕೂಡಾ ತನಗೆ ಕಪ್ಪ ಕಾಣಿಕೆ ಸಲ್ಲಿಸಬೇಕೆಂದು ಭರತ ಚಕ್ರವರ್ತಿ ಅವರಿಗೆ ಓಲೆಯನ್ನು ಕಳುಹಿಸುತ್ತಾನೆ. ಸೈನಿಕರಿಗೆ ವಿಶ್ರಾಂತಿ ಪಡೆಯಲು ಆದೇಶ ನೀಡುತ್ತಾನೆ.

ರತ್ನಗಿರಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳು

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಬುಧವಾರ ೨೧೬ ಕಲಶಗಳಿಂದ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಡೆಯಿತು.
ಯಜ್ಞ ಶಾಲೆಯಲ್ಲಿ ಜಿನ ಸಹಸ್ರ ನಾಮ ವಿಧಾನ, ಧ್ವಜ ಪೂಜೆ, ಶ್ರೀಬಲಿ ವಿಧಾನ ಮತ್ತು ಮಹಾ ಮಂಗಳಾರತಿ ನಡೆಯಿತು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...