Sunday, June 29, 2025

ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ: 60.5 ಕೋಟಿ ರೂ. ಪ್ರೀಮಿಯಂ ಹಸ್ತಾಂತರ

ಉಜಿರೆ: ವ್ಯವಹಾರಕ್ಕಾಗಿ ಪ್ರಾರಂಭಗೊಂಡ ವಿಮಾ ಸಂಸ್ಥೆಗಳು ಆರೋಗ್ಯ ವಿಮೆಯನ್ನೂ ಮಾಡಿ ಆರೋಗ್ಯ ಭಾಗ್ಯ ಕಾಪಾಡಲು ನೆರವು ಹಾಗೂ ಭರವಸೆ ನೀಡುತ್ತಿರುವುದು ಆಶಾದಾಯಕವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಯೋಜನೆಯಂತೆ ಅರುವತ್ತೂವರೆ ಕೋಟಿ ರೂ. ಪ್ರೀಮಿಯಂ ಮೊತ್ತವನ್ನು ವಿಮಾ ಕಂಪೆನಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.
ಹಿಂದೆ ಆರೋಗ್ಯ ಭಾಗ್ಯ ಕಾಪಾಡಲು ದೇವರಿಗೆ ಹರಕೆ ಹೇಳುತ್ತಿದ್ದೆವು. ಪ್ರಾರ್ಥನೆ ಸಲ್ಲಿಸುತ್ತಿದ್ದೆವು. ಆದರೆ ಇಂದು ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗಳು ಹಾಗೂ ಸಂಶೋಧನೆಗಳು ಆಗಿದ್ದು ಯಾವುದೇ ರೋಗವನ್ನು ಕೂಡಾ ಶಮನಗೊಳಿಸುವ ಸಾಧ್ಯತೆ ಇದೆ. ಆದರೆ ಅಪಾರ ಹಣದ ಅಗತ್ಯವಿದೆ. ಆದುದರಿಂದ ಪ್ರತಿಯೊಬ್ಬರು ಆರೋಗ್ಯವಿಮೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ.
2004 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರು ಮತ್ತು ಅವರಕುಟುಂಬದವರ ಆರೋಗ್ಯ ರಕ್ಷಣೆಗಾಗಿ ಸಂಪೂರ್ಣ ಸುರಕ್ಷಾ ಆರೋಗ್ಯ ಆರೋಗ್ಯ ವಿಮೆಯನ್ನು ಪ್ರಾರಂಭಿಸಲಾಗಿದೆ. ಕಳೆದ 15 ವರ್ಷಗಳಲ್ಲಿ ಹತ್ತು ಲಕ್ಷ ಮಂದಿ ಸದಸ್ಯರು 467 ಕೋಟಿ ರೂ. ಮೊತ್ತದ ವಿವಿಧ ಸೌಲಭ್ಯಗಳನ್ನು ಆರೋಗ್ಯ ವಿಮೆಯಿಂದ ಪಡೆದಿರುತ್ತಾರೆ ಎಂದು ಹೆಗ್ಗಡೆಯವರು ತಿಳಿಸಿದರು.
ಪ್ರೀಮಿಯಂ ಸ್ವಲ್ಪ ಹೆಚ್ಚಾದರೂ, ಫಲಾನುಭವಿಗಳಿಗೆ ಹೆಚ್ಚಿನ ಸವಲತ್ತು ನೀಡಲಾಗುತ್ತಿದೆ.
ಈಗಾಗಲೆ ನಾಲ್ಕು ಪ್ರತಿಷ್ಠಿತ ವಿಮಾ ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ವಿಮಾ ಸೌಲಭ್ಯ ನೀಡಲಾಗುತ್ತಿದೆ.
ಮುಂದಿನ ವರ್ಷಕ್ಕೆ ನೇಶನಲ್ ಇನ್ಸೂರೆನ್ಸ್, ನ್ಯೂ ಇಂಡಿಯಾ ಆಶ್ಯೂರೆನ್ಸ್ ಮತ್ತು ಓರಿಯಂಟಲ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರು ವಿಭಾಗವು ಆರೋಗ್ಯ ವಿಮಾ ಸೇವೆ ನೀಡಲು ಒಪ್ಪಿಕೊಂಡಿವೆ ಎಂದು ಅವರು ತಿಳಿಸಿದರು.
ಎಲ್ಲರಿಗೂ ದೀರ್ಘಾಯುಷ್ಯದೊಂದಿಗೆ ಆರೋಗ್ಯ ಭಾಗ್ಯ ಸಿಗಲಿ. ಮಳೆ-ಬೆಳೆ ಚೆನ್ನಾಗಿ ಆಗಿ ಲೋಕ ಕಲ್ಯಾಣವಾಗಲಿ ಎಂದು ಹೆಗ್ಗಡೆಯವರು ಶುಭ ಹಾರೈಸಿದರು.
ನೇಶನಲ್ ಇನ್ಸೂರೆನ್ಸ್ ಕಮಪೆನಿಯ ವಿಭಾಗೀಯ ಪ್ರಬಂಧಕಿ ಪ್ರತಿಭಾ ಶೆಟ್ಟಿ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪೆನಿಯ ಬೆಂಗಳೂರು ಪ್ರಾದೇಶಿಕ ಪ್ರಬಂಧಕಿ ಕೆ.ಎಸ್. ಜ್ಯೋತಿ ಮತ್ತು ಮನೋಹರ್ ರೈ, ಓರಿಯಂಟಲ್ ವಿಮಾ ಕಂಪೆನಿಯ ಹಿರಿಯ ವಿಭಾಗೀಯ ಪ್ರಬಂಧಕಿ ಕೆ. ಉಷಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ ಮತ್ತು ಒಕ್ಕೂಟದ ಅಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.
ಸಂಪೂರ್ಣ ಸುರಕ್ಷಾ ವಿಭಾಗದ ಹಿರಿಯ ಅಧಿಕಾರಿ ಅಬ್ರಹಾಂ ಸ್ವಾಗತಿಸಿದರು. ಗಣೇಶ ಭಟ್ ಧನ್ಯವಾದವಿತ್ತರು. ಜಿನರಾಜ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...