Sunday, June 29, 2025

ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾಒತ್ತಡದ ಕೆಲಸಗಳು, ಅತಿಯಾದತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.
ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.
ಅಲೋಪತಿ, ಹೋಮಿಯೋಪತಿ, ನೇಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು.
ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‌ ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು. ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾದಿಂದ, ಸದಾಚಾರದೊಂದಿಗೆ ಆದರ್ಶ ಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯ ರಾದರುಎಂದು ಹೆಗ್ಗಡೆಯವರು ಹೇಳಿದರು.
ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು.
ಆಯುಷ್‌ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

More from the blog

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...