Monday, July 7, 2025

ಡಿ.15 : ರಜತ ಮಹೋತ್ಸವ ಸಂಭ್ರಮದಲ್ಲಿ ಬೆಳ್ತಂಗಡಿ ಜೈನ್ ಮಿಲನ್

ಉಜಿರೆ: ರಜತ ಮಹೋತ್ಸವ ಸಂಭ್ರಮದಲ್ಲಿರುವ ಬೆಳ್ತಂಗಡಿ ಜೈನ್ ಮಿಲನ್ ಆಶ್ರಯದಲ್ಲಿ ಡಿ.15 ರಂದು ಭಾನುವಾರ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ.
ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸುವರು.ಭಾರತೀಯ ಜೈನ್ ಮಿಲನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಅನಿತಾ ಸುರೇಂದ್ರಕುಮಾರ್ ಶುಭಾಶಂಸನೆ ಮಾಡುವರು. ಮಂಗಳೂರಿನ ಉದ್ಯಮಿ ಪುಷ್ಪರಾಜ್‌ ಜೈನ್, ಉಡುಪಿಯ ಪ್ರಸನ್ನಕುಮಾರ್, ಬಂಟ್ವಾಳದ ಸುದರ್ಶನ್‌ಜೈನ್ ಮತ್ತು ಬೆಳ್ತಂಗಡಿ ಜೈನ್ ಮಿಲನ್ ಸ್ಥಾಪಕಾಧ್ಯಕ್ಷ ಪಡಂಗಡಿ ಭೋಜರಾಜ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.

More from the blog

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...