Wednesday, February 12, 2025

ಧರ್ಮದ ಪ್ರಚಾರ ಮನೆಯಿಂದಲೇ ಪ್ರಾರಂಭವಾಗಬೇಕು- ಡಾ. ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಜೈನ ಧರ್ಮದ ರಕ್ಷಣೆ, ಅನುಷ್ಠಾನ ಮತ್ತು ಪ್ರಚಾರ ಜೈನ್‌ ಮಿಲನ್ ಗುರಿಯಾಗಬೇಕು. ಧರ್ಮದ ಪ್ರಚಾರ ಮನೆಯಿಂದಲೇ ಪ್ರಾರಂಭವಾಗಬೇಕು. ಜೈನ್‌ ಮಿಲನ್‌ಗಳು ಮುನಿಗಳ ಸೇವೆಗೂ ಆದ್ಯತೆ ನೀಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು.
ಅವರು ಧರ್ಮಸ್ಥಳದಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ವಲಯದ ಪದಾಧಿಕಾರಿಗಳ ಸಭೆಯಲ್ಲಿ ಮಾರ್ಗದರ್ಶನ ನೀಡಿದರು.
ಜನರಲ್ಲಿ ಅಂತಸ್ತಿನ ಬೇಧ ಭಾವ ಇರಬಾರದು. ಜಿನ ಭಜನೆಯಿಂದ ಸಮಾನತೆ ಸಾಧಿಸಬಹುದು. ಆಧುನಿಕತೆಯ ಪ್ರವಾಹದಲ್ಲಿದ್ದರೂ ಜೈನರು ಧರ್ಮದ ಅನುಷ್ಠಾನದಿಂದ ತಮ್ಮ ವ್ಯಕ್ತಿತ್ವ ಉಳಿಸಿಕೊಳ್ಳಬೇಕು. ವಿಶೇಷ ದಿನಗಳಲ್ಲಿ ಕುಟುಂಬ ಸಮೇತರಾಗಿ ಅನಾಥಾಶ್ರಮ, ಆಸ್ಪತ್ರೆಗಳಿಗೆ ಭೇಟಿ ನೀಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಾಜಕ್ಕೆ ಒದಗಿಸುವ ಕೆಲಸವನ್ನು ಜೈನ್ ಮಿಲನ್ ಶಾಖೆಗಳು ಮಾಡಬೇಕು ಎಂದು ಹೆಗ್ಗಡೆ ಅವರು ಸಲಹೆ ನೀಡಿದರು.


ಹೇಮಾವತಿ ವಿ. ಹೆಗ್ಗಡೆ ಅವರು ಮಾತನಾಡಿ, ಪ್ರತಿಕೂಲ ಪರಿಸ್ಥಿತಿಯಲ್ಲಿ ಸಮಾಜವನ್ನು ಮುನ್ನಡೆಸುವವನೆ ಸಮರ್ಥ ನಾಯಕ. ವ್ಯವಹಾರಗಳನ್ನು ಮಕ್ಕಳಿಗೆ ಹಸ್ತಾಂತರಿಸಿದಂತೆ, ಧರ್ಮವನ್ನು ಸಹಜ ಸ್ಥಿತಿಯಲ್ಲಿ ಮುಂದಿನ ಪೀಳಿಗೆಗೆ ಕೊಡುವ ಜವಾಬ್ದಾರಿ ನಮಗಿದೆ ಎಂದು ಹೇಳಿದರು. ದಾನ-ಧರ್ಮಾದಿ ಸತ್ಕಾರ್ಯಗಳನ್ನು ಮಾಡುವುದರೊಂದಿಗೆ ಶ್ರದ್ಧಾ ಕೇಂದ್ರಗಳ ಸ್ವಚ್ಛತೆಗೆ ಗಮನ ಹರಿಸಬೇಕು ಎಂದು ಅವರು ತಿಳಿಸಿದರು.
ಹೆಗ್ಗಡೆ ದಂಪತಿಯನ್ನು ಗೌರವಿಸಲಾಯಿತು. ಪೂರನ್‌ವರ್ಮ ರೂಪಿಸಿದ ಜೈನ್ ಮಿಲನ್ ವೆಬ್‌ಸೈಟ್ ಬಿಡುಗಡೆಗೊಳಿಸಲಾಯಿತು.
ಉಜಿರೆಯ ಡಾ. ಬಿ. ಯಶೋವರ್ಮ, ಮಂಗಳೂರು ವಲಯದ ಅಧ್ಯಕ್ಷ ಪುಷ್ಪರಾಜ ಜೈನ್ ಮತ್ತು ಡಿ. ಹರ್ಷೇಂದ್ರ ಕುಮಾರ್‌ ಜೈನ್ ಮಿಲನ್ ಸಂಘಟನೆ ಬಗ್ಗೆ ಮಾರ್ಗದರ್ಶನ ನೀಡಿದರು.
ಎ.ವಿ. ಶೆಟ್ಟಿ, ಬಿ. ಸೋಮಶೇಖರ ಶೆಟ್ಟಿ ಮತ್ತು ಎಂ.ರಾಜೇಶ್‌ ಜೈನ್ ಸಭೆಯನ್ನು ಆಯೋಜಿಸುವಲ್ಲಿ ಸಹಕರಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...