Thursday, February 13, 2025

ಕಾರ್ಗಿಲ್ ವಿಜಯೋತ್ಸವ: ಇಪ್ಪತ್ತನೆ ವಾರ್ಷಿಕ ದಿನಾಚರಣೆ

ಉಜಿರೆ: ಕಾರ್ಗಿಲ್ ವಿಜಯೋತ್ಸವದ ಇಪ್ಪತ್ತನೆ ವಾರ್ಷಿಕ ದಿನಾಚರಣೆಯ ಅಂಗವಾಗಿ ಶ್ರದ್ಧಾ ಸುಮನ್ ಶ್ರದ್ಧಾಂಜಲಿ ಕಲಶ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅದಕ್ಕೆ ಭವ್ಯ ಸ್ವಾಗತ ಕೋರಲಾಯಿತು.
ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪವಿತ್ರ ನೇತ್ರಾವತಿ ನದಿ ನೀರನ್ನು ಕಲಶಕ್ಕೆ ಹಾಕಿ, ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಪಕ್ಕದಲ್ಲಿದ್ದ ಪುಟ್ಟ ಮಕ್ಕಳನ್ನೂ ಕರೆದು ಕಲಶಕ್ಕೆ ನಮನ ಸಲ್ಲಿಸಲು ಹೇಳಿ ಸೇನೆ ಹಾಗೂ ದೇಶದ ಬಗ್ಗೆ ಅಭಿಮಾನ ಮತ್ತು ಗೌರವ ಭಾವನೆ ಬೆಳೆಸುವಂತೆ ಹೇಳಿದರು.

ಕಮಾಂಡಿಂಗ್ ಆಫೀಸರ್ ಡಾ. ಎಸ್.ಸಿ. ಭಂಡಾರಿ, ಸಿ. ದಿನೇಶ್, ಬಿ.ಪಿ. ಶಿವಕುಮಾರ್, ನಾರಾಯಣ, ಕೆ.ಎನ್. ಶೇಷಾದ್ರಿ, ಆರ್. ಸತೀಶ್, ಎಂ. ಬಾಬು, ಕೃತಿ, ಅಶ್ವಿನ್ ಬಾಬು ಉಪಸ್ಥಿತರಿದ್ದರು.
2019ರ ಜನವರಿ 25 ರಂದು ಬೆಂಗಳೂರಿನಿಂದ ಹೊರಟ ಕಲಶ ಧರ್ಮಸ್ಥಳಕ್ಕೆ ಭಾನುವಾರ ಬಂದು ಬಳಿಕ ಸುಬ್ರಹ್ಮಣ್ಯಕ್ಕೆ ಯಾನ ಮುಂದುವರಿಸಿದೆ.
ದೇಶದ 20 ರಾಜ್ಯಗಳಲ್ಲಿ 200 ನಗರಗಳಲ್ಲಿ ಕಲಶ ಯಾನ ಮುಂದುವರಿದು 2019ರ ಜುಲೈ 27 ರಂದು ನವ ದೆಹಲಿಯಲ್ಲಿ ಕಾರ್ಗಿಲ್ ಸ್ಮಾರಕ ಸದನ ತಲುಪಿ, ಅಲ್ಲಿ ಅದನ್ನು ಸಂಕ್ಷಿಸಿ ಇಡಲಾಗುವುದು ಎಂದು ಕಮಾಂಡಿಂಗ್ ಆಫೀಸರ್ ಡಾ. ಎಸ್.ಸಿ. ಭಂಡಾರಿ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...