Saturday, June 28, 2025

ಚತುರ್ವಂಶತಿ ತೀರ್ಥಂಕರರ ಆರಾಧನೆ

ಉಜಿರೆ: ಧರ್ಮಸ್ಥಳದಲ್ಲಿ ಇದೇ 9 ರಿಂದ 18ರ ವರೆಗೆ ನಡಯಲಿರುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಸೋಮವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿಚತುರ್ವಂಶತಿ (24) ತೀರ್ಥಂಕರರ ಆರಾಧನೆ ನಡೆಯಿತು.
ಪೂಜ್ಯಆಚಾರ್ಯ ಶ್ರೀ 108 ವರ್ಧಮಾನ ಸಾಗರ್ಜಿ ಮುನಿ ಮಹಾರಾಜರು, ಪೂಜ್ಯಆಚಾರ್ಯ ಶ್ರೀ 108 ಪುಷ್ಪದಂತಸಾಗರ ಮುನಿಮಹಾರಾಜರು, ಪೂಜ್ಯಆಚಾರ್ಯ ಸಿದ್ಧಸೇನ ಮುನಿಮಹಾರಾಜರು, ಮುನಿಸಂಘದವರು ಹಾಗೂ ಮಾತಾಜಿಯವರು ಉಪಸ್ಥಿತರಿದ್ದರು.
ಎಂಟು ಮಂಗಲ ದ್ರವ್ಯಗಳಿಂದ ಅಷ್ಟವಿಧಾರ್ಚನೆ ನಡೆಯಿತು.

       
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಅನಿತಾ ಸುರೇಂದ್ರಕುಮಾರ್, ಹರ್ಷೇಂದ್ರಕುಮಾರ್, ಶ್ರದ್ಧಾ ಅಮಿತ್, ಸೋನಿಯಾ ವರ್ಮ ಮತ್ತು ಸ್ಥಳೀಯ ಶ್ರಾವಕಿಯರು ಪೂಜೆಯಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾದರು.
ಪ್ರೊ.ಎಸ್. ಪ್ರಭಾಕರ್, ಡಿ. ಸುರೇಂದ್ರಕುಮಾರ್ ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ವಜ್ರ ಪಂಜರ ಆರಾಧನೆ ಇಂದು: ಮಂಗಳವಾರ ಬೆಳಿಗ್ಗೆ ಗಂಟೆ 9 ರಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಜ್ರ ಪಂಜರ ಆರಾಧನೆ ನಡೆಯುತ್ತದೆ.
ನಾಳೆ ಬುಧವಾರ ಗಣಧರ ವಲಯ ಆರಾಧನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆರ್.ಯನ್. ಪೂವಣಿ, ಉಜಿರೆ

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...