Monday, February 10, 2025

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಗೆ ಚತುರ್ಥ ಮಹಾ ಮಸ್ತಕಾಭಿಷೇಕ ಸಂಭ್ರಮ : ಜೈನ ಸಮಾಜದ ವತಿಯಿಂದ ಹೊರೆ ಕಾಣಿಕೆ ಸಮರ್ಪಣೆ

ಉಜಿರೆ: ಅವಿಭಜಿತ ದಕ್ಷಿಣ ಕನ್ನಡ (ಈಗಿನ ಉಡುಪಿ ಜಿಲ್ಲೆಯೂ ಸೇರಿ) ಜಿಲ್ಲೆಯ ಜೈನ ಸಮಾಜದ ವತಿಯಿಂದ ಗುರುವಾರ ಸಂಜೆ ಮಹಾ ಮಸ್ತಕಾಭಿಷೇಕ ಸಂದರ್ಭದಲ್ಲಿ ಹೊರೆ ಕಾಣಿಕೆ ಸಮರ್ಪಿಸಲಾಯಿತು.
ಧರ್ಮಸ್ಥಳದಲ್ಲಿ ಪ್ರವೇಶ ದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಬಂದವರನ್ನು ಸ್ವಾಗತಿಸಿ ಜಮಾ ಉಗ್ರಾಣಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಹೊರೆಕಾಣಿಕೆಯನ್ನು ಅರ್ಪಿಸಿದರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಮ್.ಎನ್. ರಾಜೇಂದ್ರ ಕುಮಾರ್, ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಕೆ. ರಾಜವರ್ಮ ಬಳ್ಳಾಲ್, ಮಂಗಳೂರಿನ ಉದ್ಯಮಿ ಪುಷ್ಪರಾಜ ಜೈನ್, ನಿರಂಜನ ಬಾವಂತಬೆಟ್ಟು, ಅಂಡಾರು ಮಹಾವೀರ ಹೆಗ್ಡೆ, ಕೆ. ಮೋಹನ ಪಡಿವಾಳ್ ಕಾರ್ಕಳ, ಸುದರ್ಶನ ಹೆಗ್ಡೆ, ಕೆ. ಜಗತ್ಪಾಲ್, ಬಂಟ್ವಾಳದ ಕೆ ಸುದರ್ಶನ್ ಜೈನ್, ಸುನಿಲ್ ಕುಮಾರ್ ಬಜಗೋಳಿ, ಕೆ. ಶೋಭಾಕರ ಬಳ್ಳಾಲ್, ಮುನಿರಾಜ ಅಜ್ರಿ, ಜೈನ್ ಟ್ರಾವೆಲ್ಸ್ ಮಾಲಕ ರತ್ನಾಕರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಜಮಾ ಉಗ್ರಾಣದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಮಾತನಾಡಿ ಮಸ್ತಾಕಾಭಿಷೇಕಕ್ಕೆ ಸರ್ವರೂ ನೀಡುತ್ತಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರೂ ಕುಟುಂಬ ಸಮೇತರಾಗಿ ಮಸ್ತಕಾಭಿಷೇಕಕ್ಕೆ ಬಂದು ಪುಣ್ಯ ಭಾಗಿಗಳಾಬೇಕೆಂದು ಆಹ್ವಾನಿಸಿದರು.
ಪ್ರೊ.ಎಸ್. ಪ್ರಭಾಕರ್, ಡಿ. ಸುರೇಂದ್ರ ಕುಮಾರ್, ಅನಿತಾ ಡಿ. ಸುರೇಂದ್ರ ಕುಮಾರ್, ಡಿ .ಹರ್ಷೇಂದ್ರ ಕುಮಾರ್, ಡಾ. ಬಿ .ಯಶೋವರ್ಮ, ಉಜಿರೆ, ಶ್ರೇಯಸ್ ಕುಮಾರ್ ಮತ್ತು ನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.

More from the blog

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...