Tuesday, July 8, 2025

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಉಜಿರೆ: ಲೋಕಸಭಾ ಚುನಾವಣೆಯೊಂದಿಗೆ ಉತ್ತಮ ಸರ್ಕಾರ ರಚನೆಯಾಗಿ ದೇಶದ ಭವಿಷ್ಯ ಉಜ್ವಲವಾಗಲಿ. ಬಡಜನರು, ಕೃಷಿಕರು, ಕಾರ್ಮಿಕರು ಹಾಗೂ ಜನಸಾಮಾನ್ಯರ ರಕ್ಷಣೆಯೊಂದಿಗೆ ಎಲ್ಲಾ ಪ್ರಜೆಗಳಿಗೆ ಸರ್ಕಾರ ರಕ್ಷಣೆಯೊಂದಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಹಾರೈಸಿ ನಾವು ಇಂದು ಮತದಾನ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಗುರುವಾರ ಅವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 168ನೆ ಮತದಾನ ಕೇಂದ್ರದಲ್ಲಿ ಅವರು ಸರದಿ ಸಾಲಿನಲ್ಲಿ ಹೋಗಿ ಮತದಾನ ಮಾಡಿ ಹೊರಗೆ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಉತ್ತಮ ಯೋಜನೆ ರೂಪಿಸಿ ಕಾರ್ಯ ನಿರ್ವಹಿಸಲಿ ಎಂದು ಅವರು ಹಾರೈಸಿದರು.
ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ , ಡಿ. ಶ್ರೇಯಸ್ ಕುಮಾರ್ ಮತ್ತು ಡಿ. ನಿಶ್ಚಲ್ ಕುಮಾರ್ ಕೂಡಾ ಸರದಿ ಸಾಲಿನಲ್ಲಿ ಹೋಗಿ ಮತದಾನ ಮಾಡಿದರು.

More from the blog

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...