Thursday, July 10, 2025

ಉಲಾಯಿ – ಪಿದಾಯಿ ಆಟ ಆಡುತ್ತಿದ್ದ ಅಡ್ಡೆಗೆ ಜಿಲ್ಲಾ ಪೋಲೀಸ್ ತಂಡದಿಂದ ದಾಳಿ. ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಹಾಗೂ 12 ಮಂದಿ ವಶಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಮನೆಯೊಂದರಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಉಲಾಯಿ ಪಿದಾಯಿ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರ ದಲ್ಲಿ ದಾಳಿ ನಡೆಸಿದ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್‌ ಅವರು ಆಟದಲ್ಲಿ ನಿರತರಾಗಿದ್ದ 12 ಮಂದಿಯನ್ನು ಬಂಧಿಸಿ ಆಟಕ್ಕೆ ಬಳಸಿದ ಸೊತ್ತುಗಳ ಸಹಿತ ಸಾವಿರಾರು ರೂ ನಗದು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಆಟದಲ್ಲಿ ನಿರತರಾಗಿದ್ದ

1] ಕೃಷ್ಣ ಪೂಜಾರಿ 2] ರೋಹಿತಾಶ್ವ 3] ಗೋಪಾಲ 4] ಸತೀಶ ಮೂಲ್ಯ 5] ವಿಜಯ ಫೆರ್ನಾಂಡಿಸ್‌ 6] ವಿಶ್ವಾಸ್‌ ಭಂಡಾರಿ 7] ಗಂಗಾಧರ ಪೂಜಾರಿ 8] ಕೃಷ್ಣಪ್ಪ 9] ಶಿವಪ್ರಸಾದ್‌ 10] ಮೊಹಮ್ಮದ್‌ ಶರೀಫ್‌ 11] ಮೊಹಮ್ಮದ್‌ ಅಶ್ರಫ್‌ 12] ರಿಯಾಝ್‌

ಅವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಬಂದಿತರಿಂದ  45,000/-, ನಗದು ಹಾಗೂ 12 ಮೊಬೈಲ್‌ ಫೋನ್‌ ಗಳು ಅಂದಾಜು 40,000/, 4 ಬೈಕ್‌ ಗಳು ಅಂದಾಜು ಮೌಲ್ಯ 1,20,000/-, 1 ಓಮ್ನಿ ವಾಹನ ಅಂದಾಜು ಮೌಲ್ಯ 50,000/-, 1 ಆಟೋರಿಕ್ಷಾ ಅಂದಾಜು ಮೌಲ್ಯ 40,000/- ವಶಕ್ಕೆ ಪಡೆದಿದ್ದಾರೆ.

ನಾವೂರ ಗ್ರಾಮದ ಬಡಗುಂಡಿ‌ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಉಲಾಯಿ ಪಿದಾಯಿ ಆಡುತ್ತಿದ್ದ ಸ್ಥಳಕ್ಕೆ ಜಿಲ್ಲಾ ಪೋಲೀಸ್ ಮಾಹಿತಿ ಯಂತೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದಾಗ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಉಲಾಯಿ ಪಿದಾಯಿ ಆಡುತ್ತಿದ್ದು ಕಂಡು ಬಂದಿದ್ದು ಸ್ಥಳದಲ್ಲಿದ್ದ 12 ಜನರನ್ನು ವಶಕ್ಕೆ ಪಡೆದಿದ್ದು ಅವರುಗಳು ರವರಾಗಿದ್ದು ಉಲಾಯಿ ಪಿದಾಯಿ ಆಡುವುದಕ್ಕೆ ಬಳಸಿದ ನಗದು ಹಾಗೂ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಗ್ರಾಮಾಂತರ ಠಾಣಾ ಅ.ಕ್ರ 83/2021 ಕಲಂ 78, 80 ಕರ್ನಾಟಕ ಪೊಲೀಸ್‌ ಕಾಯ್ದೆ 1963 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿರುತ್ತದೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...