Wednesday, February 12, 2025

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರ್ ಶಾಖೆಯ ಉದ್ಘಾಟನೆ

ದೇಶದ ಸಾರ್ವಜನಿಕ ಕ್ಷೇತ್ರದ 5ನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಮಡಂತ್ಯಾರು ತಾಖೆಯ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು.

ಗ್ರಾಹಕರಿಗೆ ಇನ್ನೂ ಉತ್ತಮ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಶಾಖೆಯನ್ನು ನವೀಕರಿಸಲಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ತನ್ನ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವುದಕ್ಕೆ ಹೆಸರುವಾಸಿಯಾಗಿದೆ ಹಾಗೂ ತನ್ನ ಗ್ರಾಹಕರಿಗಾಗಿ ವಿವಿಧ ಡಿಜಿಟಲ್ ಉತ್ಪನ್ನಗಳು, ಠೇವಣಿದಾರರಿಗೆ, ಹಿರಿಯ ನಾಗರಿಕರಿಗೆ ಅತ್ಯಾಕರ್ಷಕ ಬಡ್ಡಿ ದರ ಹಾಗೂ ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ವಿವಿಧ ಸಾಲಗಳನ್ನು ನೀಡುತ್ತಿದೆ. ಜನತೆಗೆ ಹಣಕಾಸಿನ ಸಾಕ್ಷರತೆ ಮತ್ತು ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಸದಾ ಬದ್ಧವಾಗಿರುತ್ತದೆ.

ವಲಯ ಮುಖ್ಯಸ್ಥರಾದ ರೇಣು ನಾಯರ್ ನವೀಕೃತ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮಡಂತ್ಯಾರ್ ಗೆ ಅಭಿವೃದ್ಧಿಗೆ ಪೂರಕವಾಗಿ ಸಕಲ ಸವಲತ್ತು ಇರುವ ನವೀಕೃತ ತಾಖೆಯನ್ನು ನೀಡುವ ಗುರಿಯನ್ನು ಇಂದು ತಲುಪಿದ್ದೇವೆ, ಬ್ಯಾಂಕ್ ಗಳು ವಿಲೀನಗೊಂಡ ನಂತರ ಜನರಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುತ್ತಿದೆ ಹಾಗೂ ಇದರ ಲಾಭ ಜನಸಾಮಾನ್ಯರಿಗೆ ದೊರಕುತ್ತಿದೆ. ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾದ ಮಹೇಶ ಜೆ ನೆರಿದಿದ್ದ ಗಣ್ಯರನ್ನು ಮತ್ತು ಗ್ರಾಹಕರನ್ನು ಸ್ವಾಗತಿಸಿ ಮಡಂತ್ಯಾರಿನ ಜನತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಶಾಖೆಯು ಸ್ಥಳೀಯರ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸುವಲ್ಲಿ ಬಹು ಮಹತ್ವದ ಪಾತ್ರವಹಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಪಂಚಾಯತಿನ ಅಧ್ಯಕ್ಷರಾದ ರೂಪಾ ನವೀನ್ ಮತನಾಡುತ್ತಾ ಗ್ರಾಮ ಪಂಚಾಯತ್ ಈ ಬ್ಯಾಂಕಿನಿಂದ ಹಲವಾರು ಪ್ರಯೋಜನ ಪಡೆದಿದೆ ಹಾಗೂ ನಮ್ಮ ಎಲ್ಲಾ ಕೆಲಸ ಕಾರ್ಯಗಳು ಸಾಂಗವಾಗಿ ನಡೆಯುವಲ್ಲಿ ಶಾಖೆಯ ಸಿಬಂದಿಗಳು ಸಹಕರಿಸುತ್ತಿದ್ದಾರೆ ಎಂದರು.

ಇನ್ನೋರ್ವ ಮುಖ್ಯ ಇತಿಥಿಗಳಾದ ವಿಠಲ ಶೆಟ್ಟಿ ಮಾತನಾಡಿ ಬ್ಯಾಂಕಿನ ಹಲವಾರು ಯೋಜನೆಗಳು ಜನರಿಗೆ ತಲುಪುವುದರಿಂದ ಜನರಿಗೆ ತುಂಬಾ ಪ್ರಯೋಜನವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಯಂತ್ ಶೆಟ್ಟಿ ಹಾಗೂ ಅಶೋಕ್ ಗುಂಡ್ಕಲಿಕೆ ಮಾತನಾಡುತ್ತಾ ಶಾಖೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಕಾಖಾ ಪ್ರಬಂಧಕರಾದ ಅಶೋಕ್ ಕೋಟ್ಯಾನ್ ಮಾಡಿದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...