Tuesday, February 11, 2025

ಶ್ರೀರಾಮ ಪದವಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿನಲ್ಲಿ ಪ್ರಣತಿ ಇಂಗ್ಲೀಷ್ ಸಂಘದ ಸಹಯೋಗದೊಂದಿಗೆ ಐ.ಕ್ಯೂ.ಎ.ಸಿ. ಮತ್ತು ವೃತ್ತಿ ಮಾರ್ಗದರ್ಶನ ಘಟಕ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಎನ್ ಜಿ ಒ ವೀಡಿಯಂನ ಸಂಸ್ಥಾಪಕ  ಆಚಾರ್ಯ ಅಜಿತ್ ಕುಮಾರ್ ಉದ್ಘಾಟಿಸಿ ಭಾರತದ ಸಂಸ್ಕೃತಿ ಮಹತ್ತರವಾದದ್ದು. ಇದರ ಅರಿವು ಮೂಡಬೇಕಾದರೆ ಇತಿಹಾಸದ ಜ್ಞಾನ ಪಡೆಯುವುದು ಅನಿವಾರ್‍ಯ. ಯಾವಾಗ ಭಾರತದ ಇತಿಹಾಸ ತಿಳಿಯುವುದೋ ಅಂದು ಭಾರತೀಯರ ಸಾಮರ್ಥ ತಿಳಿಯಲು ಸಾಧ್ಯ. ಭಾರತದ ಮೂಲಭಾಷೆಯಾದ ಸಂಸ್ಕೃತವು ಇಂದು ದೇಶ-ವಿದೇಶಗಳಲ್ಲಿ ತನ್ನ ಛಾಪನ್ನು ಮೂಡಿಸಿ ನಾಸಾದ ವಿಜ್ಞಾನಿಗಳು ಕೂಡಾ ಈ ಭಾಷೆಯ ಬಗ್ಗೆ ತಿಳಿಯ ಹೊರಟಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದರು.
ವೇದಿಕೆಯಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಹಾಗೂ ವಿಡಿಯಂನ ಸದಸ್ಯೆ ವೀಣಾ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್., ಪ್ರಣತಿ ಇಂಗ್ಲೀಷ್ ಸಂಘದ ನಿರ್ಧೇಶಕಿ ಶ್ರೀಮತಿ ಎಲ್ ಶ್ರೀದೇವಿ ಉಪಸ್ಥಿತರಿದ್ದರು.
ಅತಿಥಿಗಳನ್ನು ವಿದ್ಯಾರ್ಥಿಗಳಾದ ಕವಿತಾ ಸ್ವಾಗತಿಸಿ, ಅನುಷಾ ವಂದಿಸಿ, ನೇಹಾ ರಾಥೋರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...