Saturday, July 12, 2025

ಶ್ರೀರಾಮ ಪದವಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿನಲ್ಲಿ ಪ್ರಣತಿ ಇಂಗ್ಲೀಷ್ ಸಂಘದ ಸಹಯೋಗದೊಂದಿಗೆ ಐ.ಕ್ಯೂ.ಎ.ಸಿ. ಮತ್ತು ವೃತ್ತಿ ಮಾರ್ಗದರ್ಶನ ಘಟಕ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಎನ್ ಜಿ ಒ ವೀಡಿಯಂನ ಸಂಸ್ಥಾಪಕ  ಆಚಾರ್ಯ ಅಜಿತ್ ಕುಮಾರ್ ಉದ್ಘಾಟಿಸಿ ಭಾರತದ ಸಂಸ್ಕೃತಿ ಮಹತ್ತರವಾದದ್ದು. ಇದರ ಅರಿವು ಮೂಡಬೇಕಾದರೆ ಇತಿಹಾಸದ ಜ್ಞಾನ ಪಡೆಯುವುದು ಅನಿವಾರ್‍ಯ. ಯಾವಾಗ ಭಾರತದ ಇತಿಹಾಸ ತಿಳಿಯುವುದೋ ಅಂದು ಭಾರತೀಯರ ಸಾಮರ್ಥ ತಿಳಿಯಲು ಸಾಧ್ಯ. ಭಾರತದ ಮೂಲಭಾಷೆಯಾದ ಸಂಸ್ಕೃತವು ಇಂದು ದೇಶ-ವಿದೇಶಗಳಲ್ಲಿ ತನ್ನ ಛಾಪನ್ನು ಮೂಡಿಸಿ ನಾಸಾದ ವಿಜ್ಞಾನಿಗಳು ಕೂಡಾ ಈ ಭಾಷೆಯ ಬಗ್ಗೆ ತಿಳಿಯ ಹೊರಟಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದರು.
ವೇದಿಕೆಯಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಹಾಗೂ ವಿಡಿಯಂನ ಸದಸ್ಯೆ ವೀಣಾ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್., ಪ್ರಣತಿ ಇಂಗ್ಲೀಷ್ ಸಂಘದ ನಿರ್ಧೇಶಕಿ ಶ್ರೀಮತಿ ಎಲ್ ಶ್ರೀದೇವಿ ಉಪಸ್ಥಿತರಿದ್ದರು.
ಅತಿಥಿಗಳನ್ನು ವಿದ್ಯಾರ್ಥಿಗಳಾದ ಕವಿತಾ ಸ್ವಾಗತಿಸಿ, ಅನುಷಾ ವಂದಿಸಿ, ನೇಹಾ ರಾಥೋರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...