Tuesday, July 1, 2025

ಉಪ್ಪಿನಂಗಡಿ: ವಿಪತ್ತು ನಿರ್ವಹಣಾ ತಂಡಕ್ಕೆ ಜಾಕೆಟ್ ಮತ್ತು ಗಮ್ ಬೂಟ್ ವಿತರಣೆ

ಉಪ್ಪಿನಂಗಡಿ: ಉಪ್ಪಿನಂಗಡಿ ಘಟಕದ ವಿಪತ್ತು ನಿರ್ವಹಣಾ ತಂಡಕ್ಕೆ ಜು.7 ರಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ 5 ಲೈಫ್ ಜಾಕೆಟ್, 5 ಗಮ್‌ಬೂಟ್, ಸ್ಟ್ರೆಚ್ಚರ್, ಟಾರ್ಚ್‌ಲೈಟ್ ಮುಂತಾದ ವಿಪತ್ತು ನಿರ್ವಹಣಾ ಸರಕುಗಳನ್ನು ನೀಡಲಾಯಿತು.

ಮಳೆಗಾಲದ ನೆರೆ ವಿಪತ್ತು ಸಂದರ್ಭಗಳಲ್ಲಿ ದ.ಕ. ಜಿಲ್ಲೆಯಾದ್ಯಂತ ಕೆಲಸ ನಿರ್ವಹಿಸುತ್ತಿರುವ ದ.ಕ. ಜಿಲ್ಲಾ ಗೃಹರಕ್ಷಕ ದಳದ ವಿಪತ್ತು ನಿರ್ವಹಣಾ ತಂಡಕ್ಕೆ ಜಿಲ್ಲಾ ವಿಪತ್ತು ನಿರ್ವಹಣಾ ನಿಧಿಯಿಂದ ಜಿಲ್ಲಾಧಿಕಾರಿಗಳು 2020 ಇಸವಿಯಲ್ಲಿ ಸುಮಾರು 50 ಲೈಫ್ ಜಾಕೆಟ್, 50 ಗಮ್‌ಬೂಟ್, 10 ಟಾರ್ಚ್‌ಲೈಟ್, 15 ಹಾರೆ, 3 ಗಾಳಿ ತುಂಬುವ ಯಂತ್ರ, 8 ಸ್ಟ್ರೆಚ್ಚರ್, 1 ವಾಟರ್ ಪಂಪ್ ಮತ್ತು 5 ಬಂಡಲ್ ರೋಪ್, ಗಾಳಿ ತುಂಬಬಹುದಾದ ಬೋಟ್‌ಗಳನ್ನು ನೀಡಲಾಗಿದೆ.

ನೆರೆ ವಿಪತ್ತಿನ ಮತ್ತು ಇತರ ನೈಸರ್ಗಿಕ ವಿಪತ್ತಿನ ಸಂದರ್ಭಗಳಲ್ಲಿ ಗೃಹರಕ್ಷಕರು ಸಮಾಜದ ಆಸ್ತಿಪಾಸ್ತಿ ಮತ್ತು ಜನರ ಪ್ರಾಣರಕ್ಷಣೆ ಮಾಡುವಲ್ಲಿ ಈ ಪರಿಕರಗಳು ಬಹಳ ಉಪಯುಕ್ತ ಎಂದು ಸಮಾದೇಷ್ಟ ಡಾ| ಮುರಲೀಮೋಹನ್ ಚೂಂತಾರು ತಿಳಿಸಿದರು. ಉಪ್ಪಿನಂಗಡಿ ಘಟಕದ ಘಟಕಾಧಿಕಾರಿ ದಿನೇಶ್ ಅವರಿಗೆ ಈ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಉಪಸಮಾದೇಷ್ಟ ರಮೇಶ್, ಗೃಹರಕ್ಷಕರಾದ ವಸಂತ, ಜನಾರ್ದನ ಆಚಾರ್ಯ ಉಪಸ್ಥಿತರಿದ್ದರು.

 

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...