Friday, February 7, 2025

ಡಿ.30: ಶಶಿಕಲಾ ವರ್ಕಾಡಿ ರಚಿತ ‘ಉರಲ್’ ಗ್ರಂಥ ಬಿಡುಗಡೆ

ಮುಂಬಯಿ (ಪುತ್ತೂರು): ಪೂವರಿ ಕೂಟ ಹಾಗೂ ಯಶಸ್ ಪ್ರಕಾಶನ (ರಿ.) ಹೆಬ್ಬಾರಬೈಲು ಪುತ್ತೂರು ಇವರ ನೇತೃತ್ವದಲ್ಲಿ ಪ್ರಸ್ದಿದ್ಧ ತುಳು-ಕನ್ನಡ ಕಥೆಗಾರ್ತಿ ಶಶಿಕಲಾ ವರ್ಕಾಡಿ ರಚಿತ ತುಳು ಕಥಾ ಸಂಕಲನ ‘ಉರಲ್’ ಗ್ರಂಥ ಬಿಡುಗಡೆ ಕಾರ್ಯಕ್ರಮವು ಇದೇ ಭಾನುವಾರ (ಡಿ.30) ಬೆಳಗ್ಗೆ ನೆಹರೂ ನಗರ, ಸುದಾನ ವಸತಿಯುತ ಶಾಲೆಯ ಆವರಣದ ಎಡ್ವರ್ಡ್ ಮೆಮೋರಿಯಲ್ ಹಾಲ್‌ನಲ್ಲಿ ನಡಯಲಿದೆ ಎಂದು ಪೂವರಿ ಕೂಟ ಪುತ್ತೂರು ಇದರ ಪ್ರಧಾನ ಸಂಚಾಲಕ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದಾನ ವಿದ್ಯಾ ಸಂಸ್ಥೆಯ ಸಂಚಾಲಕ ರೆ| ವಿಜಯ ಹಾರ್ವಿನ್ ಅಧ್ಯಕ್ಷತೆ ಹಾಗೂ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಬಿ.ಚಂದ್ರಹಾಸ ರೈ, ಹವ್ಯಾಸಿ ಯಕ್ಷಗಾನ ಕಲಾವಿದ, ಸಿವಿಲ್ ಇಂಜಿನಿಯರ್ ಎ. ಜಿ ಜಗನ್ನೀ ವಾಸರಾವ್ ಅವರ ಗೌರವ ಉಪಸ್ಥಿಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ವಾಮನ ನಂದಾವರ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ತುಳು ಕೂಟದ ಮಾಜಿ ಅಧ್ಯಕ್ಷ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಗ್ರಂಥ ಪರಿಚಯ ಮಾಡಲಿದ್ದಾರೆ. ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.



More from the blog

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...

ಕೇಂದ್ರ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ : ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಸಂಸದ

ನವದೆಹಲಿ : ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡದ ರೈತರು ಪ್ರಮುಖವಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ...