Wednesday, January 28, 2026

ಮಾ. 29ರಿಂದ ಸುಲ್ತಾನ್ ನಗರ ಮಖಾಂ ಉರೂಸ್-ಧಾರ್ಮಿಕ ಮತ ಪ್ರವಚನ

ಬಂಟ್ವಾಳ: ಕೂಡಿಬೈಲು ನಾವೂರು ಸುಲ್ತಾನ್ ನಗರ ಬದ್ರಿಯಾ ಜುಮಾ ಮಸೀದಿ ಇದರ ವಠಾರದಲ್ಲಿ ಅಂತ್ಯ ವಿಶ್ರಮಹೊಂದಿರುವ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಮಖಾಂ ಉರೂಸ್, ಸ್ವಲಾತ್ ವಾರ್ಷಿಕ ಹಾಗೂ 3 ದಿವಸಗಳ ಧಾರ್ಮಿಕ ಮತ ಪ್ರವಚನಗಳೊಂದಿಗೆ ಜರಗಲಿದೆ.
ಮಾ. 29 ರಂದು ಮಿತ್ತಬೈಲ್ ಜಬ್ಬಾರ್ ಉಸ್ತಾದರ ಪುತ್ರ ಕೆ.ಪಿ. ಇರ್ಷಾದ್ ಹುಸೈನ್ ದಾರಿಮಿ ಮಿತ್ತಬೈಲು ಉದ್ಘಾಟನೆಗೈಯಲಿದ್ದು, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು “ವಿಚಿತ್ರ ಪ್ರಪಂಚ” ಎಂಬ ವಿಷಯದಲ್ಲಿ ಮತ ಪ್ರವಚನ ನೀಡುವರು. ಮಾ. 30 ರಂದು “ದುಶ್ಚಟಗಳ ಭೀಕರತೆ” ಎಂಬ ವಿಷಯದಲ್ಲಿ ಯಾಕೂಬ್ ಸಅದಿ ನಾವೂರು ಮತ ಪ್ರವಚನ ನೀಡಲಿದ್ದು, ಮಾ. 31ರಂದು ಉರೂಸ್ ಸಮಾರೋಪದ ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ವಹಿಸುವರು, ಮಸೀದಿ ಗೌರವಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಪ್ರಸ್ತಾವಿಸುವರು, ಸುಲ್ತಾನ್ ನಗರ ಖತೀಬ ಹಾಶಿಂ ಫೈಝಿ ಪಾಂಡವರಕಲ್ಲು ಉದ್ಘಾಟಿಸಲಿದ್ದು, “ಆತ್ಮಶುದ್ಧಿ ಮತ್ತು ಯೌವ್ವನದ ಮಹತ್ವ” ಎಂಬ ವಿಷಯದ ಕುರಿತು ಇಲ್ಯಾಸ್ ಅರ್ಶದಿ ಆತೂರು ಮುಖ್ಯ ಭಾಷಣ ಮಾಡುವರು. ಸೈಯದ್ ಇಬ್ರಾಹಿಂ ಬಾತಿಷಾ ತಂಙಳ್ ಅಲ್-ಅಝ್ಹರಿ ಆನೆಕಲ್ಲು ದುವಾ ಆಶೀರ್ವಚನ ನೀಡಲಿದ್ದು, ಹಲವಾರು ಉಲಮಾ ಉಮರಾ ಸಾದತ್‌ಗಳು ಭಾಗವಹಿಸಲಿದ್ದಾರೆ ಎಂದು ಉರೂಸ್ ಸಮಿತಿಯ ಅಧ್ಯಕ್ಷ ನಝೀರ್ ಸುಲ್ತಾನ್ ನಗರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...