Tuesday, February 11, 2025

ಮಾ. 29ರಿಂದ ಸುಲ್ತಾನ್ ನಗರ ಮಖಾಂ ಉರೂಸ್-ಧಾರ್ಮಿಕ ಮತ ಪ್ರವಚನ

ಬಂಟ್ವಾಳ: ಕೂಡಿಬೈಲು ನಾವೂರು ಸುಲ್ತಾನ್ ನಗರ ಬದ್ರಿಯಾ ಜುಮಾ ಮಸೀದಿ ಇದರ ವಠಾರದಲ್ಲಿ ಅಂತ್ಯ ವಿಶ್ರಮಹೊಂದಿರುವ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಮಖಾಂ ಉರೂಸ್, ಸ್ವಲಾತ್ ವಾರ್ಷಿಕ ಹಾಗೂ 3 ದಿವಸಗಳ ಧಾರ್ಮಿಕ ಮತ ಪ್ರವಚನಗಳೊಂದಿಗೆ ಜರಗಲಿದೆ.
ಮಾ. 29 ರಂದು ಮಿತ್ತಬೈಲ್ ಜಬ್ಬಾರ್ ಉಸ್ತಾದರ ಪುತ್ರ ಕೆ.ಪಿ. ಇರ್ಷಾದ್ ಹುಸೈನ್ ದಾರಿಮಿ ಮಿತ್ತಬೈಲು ಉದ್ಘಾಟನೆಗೈಯಲಿದ್ದು, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು “ವಿಚಿತ್ರ ಪ್ರಪಂಚ” ಎಂಬ ವಿಷಯದಲ್ಲಿ ಮತ ಪ್ರವಚನ ನೀಡುವರು. ಮಾ. 30 ರಂದು “ದುಶ್ಚಟಗಳ ಭೀಕರತೆ” ಎಂಬ ವಿಷಯದಲ್ಲಿ ಯಾಕೂಬ್ ಸಅದಿ ನಾವೂರು ಮತ ಪ್ರವಚನ ನೀಡಲಿದ್ದು, ಮಾ. 31ರಂದು ಉರೂಸ್ ಸಮಾರೋಪದ ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ವಹಿಸುವರು, ಮಸೀದಿ ಗೌರವಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಪ್ರಸ್ತಾವಿಸುವರು, ಸುಲ್ತಾನ್ ನಗರ ಖತೀಬ ಹಾಶಿಂ ಫೈಝಿ ಪಾಂಡವರಕಲ್ಲು ಉದ್ಘಾಟಿಸಲಿದ್ದು, “ಆತ್ಮಶುದ್ಧಿ ಮತ್ತು ಯೌವ್ವನದ ಮಹತ್ವ” ಎಂಬ ವಿಷಯದ ಕುರಿತು ಇಲ್ಯಾಸ್ ಅರ್ಶದಿ ಆತೂರು ಮುಖ್ಯ ಭಾಷಣ ಮಾಡುವರು. ಸೈಯದ್ ಇಬ್ರಾಹಿಂ ಬಾತಿಷಾ ತಂಙಳ್ ಅಲ್-ಅಝ್ಹರಿ ಆನೆಕಲ್ಲು ದುವಾ ಆಶೀರ್ವಚನ ನೀಡಲಿದ್ದು, ಹಲವಾರು ಉಲಮಾ ಉಮರಾ ಸಾದತ್‌ಗಳು ಭಾಗವಹಿಸಲಿದ್ದಾರೆ ಎಂದು ಉರೂಸ್ ಸಮಿತಿಯ ಅಧ್ಯಕ್ಷ ನಝೀರ್ ಸುಲ್ತಾನ್ ನಗರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...