ಮಂಗಳೂರು: ದ.ಕ ಜಿಲ್ಲೆಗೆ ಈಗ ಸರ್ಕಾರಿ ಆಸ್ಪತ್ರೆ ಇಲ್ಲ ಎಂದು ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡಿದ್ದಾರೆ, ಅದರ ಬಗ್ಗೆಯೂ ಖಾಲಿ ಮಾಡುವಾಗ ಹೇಳಿಲ್ಲ ಎಂದು ಆರೋಪಿಸಿದ್ದಾರೆ.

ಬಡವರ್ಗದ ಜನ ಸಂಕಷ್ಟ ಪಡುತ್ತಿದ್ದಾರೆ. ಖಾಸಗಿ ಆಸ್ಪತ್ರೆ ಗಳಲ್ಲಿ ಬಡವರಿಗೆ ಹಣ ಕಟ್ಟಲು ಸಾಧ್ಯವಿಲ್ಲ. ಮಂಗಳೂರು ಬೆಂಗಳೂರಿನ ಹಾಗೆ ಅಲ್ಲ. ಬೆಂಗಳೂರಿನಲ್ಲಿ 10 ಸರ್ಕಾರಿ ಆಸ್ಪತ್ರೆ ಇದೆ ಆದರೆ, ಮಂಗಳೂರಿನಲ್ಲಿ ಒಂದೇ ಸರ್ಕಾರಿ ಆಸ್ಪತ್ರೆ ಇರೋದು ಎಂದರು.
ವೆನ್ಲಾಕ್ ತಕ್ಷಣ ಒಪಿಡಿ ಆರಂಭ ಮಾಡಬೇಕು. ದ.ಕ ಜಿಲ್ಲಾಡಳಿತ ಬಡವರ ಕಷ್ಟವನ್ನು ಅರಿಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕಪಡಿಸಿದ್ದಾರೆ.

