Sunday, June 29, 2025

ಶಾಸಕ‌ ಖಾದರ್ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಒತ್ತಾಯ

ಬಂಟ್ವಾಳ: ಜಿಲ್ಲಾ ಯುವ ಮೋರ್ಚಾ ವತಿಯಿಂದ ಯು.ಟಿ.ಖಾದರ್ ಅವರ ವಿವಾಧಾತ್ಮಕ ಹೇಳಿಕೆ ವಿರುದ್ಧ ಮಂಗಳೂರಿನ ಪೊಲೀಸ್ ಆಯುಕ್ತ ಹರ್ಷ ಅವರಲ್ಲಿ ದೂರು ನೀಡಿದಾಗ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಶಾಸಕ ಯು.ಟಿ.ಖಾದರ್ ಅವರ ವಿವಾದಾತ್ಮಕ ಹೇಳಿಕೆ ಕೋಮು ಭಾವನೆಗಳನ್ನು ಕೆರಳಿಸಿ ಸಾರ್ವಜನಿಕ ಆಸ್ತಿಪಾಸ್ತಿಗಳ ನಷ್ಟ ಸಂಭವಿಸಲು ಸಾಧ್ಯವಿದೆ. ಹಾಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದೆ.‌

ಈ ಸಂದರ್ಭದಲ್ಲಿ ವಕೀಲರ ಪ್ರಕೋಸ್ಟದ ಸುಧಾಕರ್ ಜೋಷಿ, ಪುರಂದರ ಶೆಟ್ಟಿ, ಗಿರೀಶ್, ಮಹೇಶ್ ಜೋಗಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ, ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ, ಸುಜಿತ್ ಮಾಡೂರ್, ಕಾರ್ತಿಕ್ ಬಲ್ಲಾಳ್ ಉಪಸ್ಥಿತರಿದ್ದರು

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...