Wednesday, February 12, 2025

ಶ್ರೀ ವೈದ್ಯನಾಥ ದೈವದ ಪಾಪೆಬಂಡಿ ಮೆರವಣಿಗೆಗೆ

ಬಂಟ್ವಾಳ ಮಾ. ೩೦: ಇತಿಹಾಸ ಪ್ರಸಿದ್ದ ಬಂಟ್ವಾಳ ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ಶ್ರೀ ವೈದ್ಯನಾಥ ದೈವದ ಪಾಪೆಬಂಡಿ ಮೆರವಣಿಗೆಗೆ ಮಾ. ೩೦ರಂದು ಬಿ.ಸಿ.ರೋಡ್ ಕೈಕಂಬ ಪೊಳಲಿ ದ್ವಾರದಲ್ಲಿ ಗೌರವ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಚಾಲನೆ ನೀಡಿದರು. ಆಡಳಿತ ಸಮಿತಿ ಅಧ್ಯಕ್ಷ ಗಣೇಶ ಸುವರ್ಣ ತುಂಬೆ ಉಪಸ್ಥಿತರಿದ್ದರು.


ಚೆಂಡೆ, ವಾದ್ಯ, ಚಿಲಿಪಿಲಿ ಗೊಂಬೆ ಬಳಗ, ನಾಡಿನ ಪ್ರಸಿದ್ದ ೨೦ಕ್ಕೂ ಅಽಕ ಭಜನಾ ತಂಡಗಳ ಪಾಲ್ಗೊಳ್ಳುವಿಕೆಯಲ್ಲಿ ಮೆರವಣಿಗೆಯು ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮೂಲಕ ಬೈಪಾಸ್ ರಸ್ತೆಯಾಗಿ ಬಂಟ್ವಾಳ ಜಂಕ್ಷನ್‌ನಲ್ಲಿ ಪೇಟೆಯ ರಸ್ತೆಯಾಗಿ ದೈವಸ್ಥಾನಕ್ಕೆ ತಲುಪಿತು.
ಎ.1ರಂದು ಪಾಪೆಬಂಡಿಯನ್ನು ದೈವಕ್ಕೆ ಸಮರ್ಪಿಸುವ ಕಾರ್ಯಕ್ರಮ ನಡೆಯಲಿದೆ.
ಮೆರವಣಿಗೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು , ಮಾಜಿ ಸಚಿವ ಬಿ.ರಮಾನಾಥ ರೈ, ಬಿ.ಪದ್ಮಶೇಖರ ಜೈನ್, ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಕಿ ಶಿವಪ್ಪ ಪೂಜಾರಿ, ಉದಯ ಕುಮಾರ್, ಸುರೇಶ್ ಕುಲಾಲ್, ಜಯರಾಮ ಸಾಮಾನಿ, ಮೋನಪ್ಪ ಮಜಿ, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಜಗನ್ನಾಥ ತುಂಬೆ, ಮಹಾಬಲ ಬಂಗೇರ, ವೆಂಕಪ್ಪ ಪೂಜಾರಿ, ಶಿವಪ್ರಸಾದ್, ಗೋಪಾಲ ಸುವರ್ಣ ಸಹಿತ ಪ್ರಮುಖರು ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...