Wednesday, January 28, 2026

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಭಾರತಿರಾಜೇಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು ಆಯ್ಕೆ

ವಾಮದಪದವು: ಇಲ್ಲಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತಿಗೆ ಬುಧವಾರ ನಡೆದ ಅಧ್ಯಕ್ಷ/ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಭಾರತಿರಾಜೇಂದ್ರ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು ಆಯ್ಕೆಯಾಗಿದ್ದಾರೆ.

ಇಪ್ಪತ್ತು ಸದಸ್ಯ ಬಲವನ್ನು ಹೊಂದಿರುವ ಚೆನ್ನೈತ್ತೋಡಿ ಗ್ರಾಮ ಪಂಚಾಯತಿಯಲ್ಲಿ 13 ಮಂದಿ ಕಾಂಗ್ರೇಸ್ ಬೆಂಬಲಿತರು ಹಾಗೂ ಏಳು ಮಂದಿ ಬಿಜೆಪಿ ಬೆಂಬಲಿತರಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ನಿಂದ ಭಾರತಿರಾಜೇಂದ್ರ ಮತ್ತು ಬಿಜೆಪಿಯಿಂದ ಕುಸುಮಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ನಿಂದ ಉದಯ ಕುಮಾರ್ ಶೆಟ್ಟಿ ಮತ್ತು ಬಿಜೆಪಿಯಿಂದ ರವಿರಾಮ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.

ಮತದಾನದಲ್ಲಿ ಕಾಂಗ್ರೆಸ್ ಬೆಂಬಲಿತರು ತಲಾ 13 ಮತ್ತು ಬಿಜೆಪಿ ಬೆಂಬಲಿತರು ತಲಾ 7 ಮತಗಳನ್ನು ಪಡೆದರು.

ಪಂಚಾಯತು ನೋಡಲ್ ಅಧಿಕಾರಿ ಪ್ರದೀಪ್ ಡಿಸೋಜ, ಪಂಚಾಯತು ಅಭಿವೃದ್ಧಿ ಅಧಿಕಾರಿ ಯಮುನಪ್ಪ ಕೊರವರ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದರು.

ತಾಲೂಕು ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪಕ್ಷದ ನಾಯಕರಾದ ಸುದರ್ಶನ್ ಜೈನ್, ಅಮ್ಮು ರೈ ಹರ್ಕಾಡಿ, ಅಣ್ಣಿ ಪೂಜಾರಿ ಬೆಟ್ಟುಗದ್ದೆ, ಪಿ.ಯುವರಾಜ ಆಳ್ವ, ನವೀನ್ಚಂದ್ರ ಶೆಟ್ಟಿ, ಯತೀಶ್ ಶೆಟ್ಟಿ, ಭಾರತಿ ಎಸ್.ರೈ, ಆನಂದ ಆಚಾರ್ಯ, ಅನಂತ ಪೈ, ಶ್ರೀಧರ ಜಿ.ಪೈ, ಜಯಾನಂದ್ರ ಬೊಳ್ಮಾರು, ರಮಾನಂದ್ರ ಬೆದ್ರಕಾಡು ಮೊದಲಾದವರಿದ್ದು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...