Wednesday, February 12, 2025

ವಾಮದಪದವು ವ್ಯ.ಸೇ.ಸ. ಸಂಘ: ಅಧ್ಯಕ್ಷರಾಗಿ ಕಮಲ್ ಶೆಟ್ಟಿ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ವಾಮದಪದವು ವ್ಯವಸಾಯ ಸೇವಾ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ, ಸಂಗಂ ಸ್ಟುಡಿಯೋ ಮಾಲಕ ಕಮಲ್ ಶೆಟ್ಟಿ ಬೊಳ್ಳಾಜೆ ಹಾಗೂ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಪಿಲಿಂಗಾಲ್ ಅವರು ಆಯ್ಕೆಯಾಗಿದ್ದಾರೆ.
ಜ.28ರಂದು ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, ಮಂಗಳೂರು ಉಪವಿಭಾಗದ ಅಽಕ್ಷಕ ಬಿ.ನಾಗೇಂದ್ರ ಅವರು ಚುನಾವಣಾ ಪ್ರಕ್ರಿಯೆಯನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯನ್ನು ಸಂಘದ ಸಿಬಂದಿ ವರ್ಗ ಅಭಿನಂದಿಸಿದರು.
ನಿರ್ದೇಶಕರಾದ ಯಶೋಧರ.ಬಿ.ಶೆಟ್ಟಿ , ಗೋಪಾಲಕೃಷ್ಣ ಚೌಟ, ಸುಽರ್ ಕುಮಾರ್, ವೆಂಕಟೇಶ ಭಟ್,ನಾಗರಾಜ ಶೆಟ್ಟಿ, ಧರ್ಣಪ್ಪ ನಾಯ್ಕ, ಕೊರಗು, ಆಶಾ ಜಯರಾಮ ಶೆಟ್ಟಿ , ಗೋಪಾಲಕೃಷ್ಣ ಶೆಟ್ಟಿ , ವಿವೇಕಾನಂದ ಪೂಜಾರಿ, ರೋಹಿಣಿ , ಸಂಘದ ಮುಖ್ಯ ಕಾರ್ಯನಿರ್ವಹಣಾಽಕಾರಿ ಆಲ್ಬರ್ಟ್ ಸಿ.ಡಿಸೋಜ ಮತ್ತು ಸಿಬಂದಿ ವರ್ಗ ಉಪಸ್ಥಿತರಿದ್ದರು.

13 ಸ್ಥಾನಗಳಲ್ಲಿ 10 ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು: ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಯಶೋಧರ ಬಿ.ಶೆಟ್ಟಿ , ಗೋಪಾಲಕೃಷ್ಣ ಚೌಟ, ಕಮಲ್ ಶೆಟ್ಟಿ, ಸುಽರ್ ಕುಮಾರ್, ವೆಂಕಟೇಶ ಭಟ್,ನಾಗರಾಜ ಶೆಟ್ಟಿ ,ಹಿಂದುಳಿದ ವರ್ಗ ಪ್ರವರ್ಗ ಎ ಸಾಲಗಾರ ಕ್ಷೇತ್ರದಿಂದ ಸಂಜೀವ ಪೂಜಾರಿ, ಪರಿಶಿಷ್ಠ ಪಂಗಡದ ಧರ್ಣಪ್ಪ ನಾಯ್ಕ, ಪರಿಶಿಷ್ಠ ಜಾತಿಯ ಕೊರಗು, ಸಾಲಗಾರ ಮಹಿಳಾ ಕ್ಷೇತ್ರದಲ್ಲಿ ಆಶಾ ಜಯರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು: ಸಾಲಗಾರರಲ್ಲದ ಕ್ಷೇತ್ರದಿಂದ ಗೋಪಾಲಕೃಷ್ಣ ಶೆಟ್ಟಿ, ಸಾಲಗಾರ ಸಾಮಾನ್ಯ ಹಿಂದುಳಿದ ವರ್ಗ ಪ್ರವರ್ಗ ಎ ವಿವೇಕಾನಂದ ಪೂಜಾರಿ, ಸಾಲಗಾರ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ರೋಹಿಣಿ ಅವರು ಆಯ್ಕೆಯಾಗಿದ್ದಾರೆ.
ರಿಟರ್ನಿಂಗ್ ಅಧಿಕಾರಿ, ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕ್ಷಕ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಸಿಬಂದಿ ವರ್ಗ ಸಹಕರಿಸಿದರು.

 

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...