Thursday, June 26, 2025

ನರಹರಿ ಪರ್ವತದಲ್ಲಿ ವನಮಹೋತ್ಸವ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ  ನರಹರಿ ಪರ್ವತದಲ್ಲಿ ರೋಟರಿ ಕ್ಲಬ್ ಬಂಟ್ವಾಳ. ಶ್ರೀನರಹರಿ  ಪರ್ವತ ಸದಾಶಿವ ದೇವಾಲಯ ಮತ್ತು ಅರಣ್ಯಇಲಾಖೆ    ಬಂಟ್ವಾಳ ವಲಯದ ಆಶ್ರಯದಲ್ಲಿ  ವನಮಹೋತ್ಸವ ನಡೆಯಿತು.  ನರಹರಿಪರ್ವತದ ಜೀಣೋರ್ಧಾರ ಸಮಿತಿಯ  ಗೌರವಾಧ್ಯಕ್ಷ, ಮಾಜಿಸಚಿವ ಬಿ. ರಮಾನಾಥ ರೈ  ಅವರು ಪರ್ವತದ ಪರಿಸರದಲ್ಲಿ   ಗಿಡನೆಟ್ಟು ಶುಭ ಹಾರೈಸಿದರು.

ಬಳಿಕ ನಡೆದ ಸಭಾರಂಭದ ಅಧ್ಯಕ್ಷತೆಯನ್ನು ರೋಟರಿಕ್ಲಬ್ ಅಧ್ಯಕ್ಷೆ ಶಿವಾನಿ ಆರ್ ಬಳಗ ವಹಿಸಿದ್ದರು. ಮಾಜಿ ಶಾಸಕ    ಎ ರುಕ್ಮಯ ಪೂಜಾರಿ ಮಾತನಾಡಿ ಅರಣ್ಯ ಸಂಪತ್ತನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆವರದಾನವಾಗುವಂತೆ ಮಾಡುವುದು ನಮ್ಮೆಲ್ಲರಕರ್ತವ್ಯವೆಂದು ಹೇಳಿದರು. ಬಂಟ್ವಾಳ ಉಪವಲಯ ಅರಣ್ಯಧಿಕಾರಿ ಯಶೋಧರ್‌ , ಕ್ಷೇತ್ರದ ಆಡಳಿತಮೋಕ್ತೆಸರಾದ ಡಾ| ಪ್ರಶಾಂತ್ ಮಾರ್ಲ , ಕ್ಷೇತ್ರದಜೀಣೋದ್ಧಾರ ಸಮಿತಿಯ ಡಾ.ಆತ್ಮರಂಜನ್ ರೈ , ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶಂಕರ್ ಆಚಾರ್ಯಕಾರ್ಯಕ್ರಮ ನಿರೂಪಿಸಿದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...