Monday, January 26, 2026

ನರಹರಿ ಪರ್ವತದಲ್ಲಿ ವನಮಹೋತ್ಸವ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ  ನರಹರಿ ಪರ್ವತದಲ್ಲಿ ರೋಟರಿ ಕ್ಲಬ್ ಬಂಟ್ವಾಳ. ಶ್ರೀನರಹರಿ  ಪರ್ವತ ಸದಾಶಿವ ದೇವಾಲಯ ಮತ್ತು ಅರಣ್ಯಇಲಾಖೆ    ಬಂಟ್ವಾಳ ವಲಯದ ಆಶ್ರಯದಲ್ಲಿ  ವನಮಹೋತ್ಸವ ನಡೆಯಿತು.  ನರಹರಿಪರ್ವತದ ಜೀಣೋರ್ಧಾರ ಸಮಿತಿಯ  ಗೌರವಾಧ್ಯಕ್ಷ, ಮಾಜಿಸಚಿವ ಬಿ. ರಮಾನಾಥ ರೈ  ಅವರು ಪರ್ವತದ ಪರಿಸರದಲ್ಲಿ   ಗಿಡನೆಟ್ಟು ಶುಭ ಹಾರೈಸಿದರು.

ಬಳಿಕ ನಡೆದ ಸಭಾರಂಭದ ಅಧ್ಯಕ್ಷತೆಯನ್ನು ರೋಟರಿಕ್ಲಬ್ ಅಧ್ಯಕ್ಷೆ ಶಿವಾನಿ ಆರ್ ಬಳಗ ವಹಿಸಿದ್ದರು. ಮಾಜಿ ಶಾಸಕ    ಎ ರುಕ್ಮಯ ಪೂಜಾರಿ ಮಾತನಾಡಿ ಅರಣ್ಯ ಸಂಪತ್ತನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆವರದಾನವಾಗುವಂತೆ ಮಾಡುವುದು ನಮ್ಮೆಲ್ಲರಕರ್ತವ್ಯವೆಂದು ಹೇಳಿದರು. ಬಂಟ್ವಾಳ ಉಪವಲಯ ಅರಣ್ಯಧಿಕಾರಿ ಯಶೋಧರ್‌ , ಕ್ಷೇತ್ರದ ಆಡಳಿತಮೋಕ್ತೆಸರಾದ ಡಾ| ಪ್ರಶಾಂತ್ ಮಾರ್ಲ , ಕ್ಷೇತ್ರದಜೀಣೋದ್ಧಾರ ಸಮಿತಿಯ ಡಾ.ಆತ್ಮರಂಜನ್ ರೈ , ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶಂಕರ್ ಆಚಾರ್ಯಕಾರ್ಯಕ್ರಮ ನಿರೂಪಿಸಿದರು.

More from the blog

ಪುದು ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ದ. ಕ. ಜಿ. ಪಂ. ಮಾ. ಹಿ. ಪ್ರಾ. ಶಾಲೆ ಪುದು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮ್ಲಾನ್ ಅವರು ಧ್ವಜಾರೋಹಣ...

ಸಜೀಪಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ..

ಬಂಟ್ವಾಳ : ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪ ಬದಲಾವಣೆ ಮಾಡಿದ ವಿರುದ್ಧ ವಲಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ...

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...