Tuesday, February 3, 2026

ಟೀಮ್ ವೀರಾಂಜನೇಯ ಫರಂಗಿಪೇಟೆ ತಂಡದ ಸಾರಥ್ಯದಲ್ಲಿ   ವೃಕ್ಷಾರೋಪಣ

ಬಂಟ್ವಾಳ: ಟೀಮ್ ವೀರಾಂಜನೇಯ ಫರಂಗಿಪೇಟೆ ತಂಡದ ಆಶ್ರಯದಲ್ಲಿ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಹತ್ತಿರ ತುಪ್ಪೆಕಲ್ಲು  ವಠಾರದಲ್ಲಿವನಮಹೋತ್ಸವ ಕಾರ್ಯಕ್ರಮ ವೃಕ್ಷಾರೋಪಣ –ವೃಕ್ಷ ವೃದ್ಧಿಯಿಂದ ಮನುಕುಲಕ್ಕೆ ಸಮೃದ್ಧಿ ಎಂಬ ಶೀರ್ಷಿಕೆಯೊಂದಿಗೆ ಸಹಸ್ರಾರು ನಾಗರಿಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಪರಿಸರ ಸಂವರ್ಧನೆ ಅಭಿನಂದನೆಯ ಅರ್ಕುಳ ಬೀಡು ವಜ್ರನಾಭ ಶೆಟ್ಟಿ: ಏರುತ್ತಿರುವ ತಾಪಮಾನ  ಮಳೆಯ ಕಣ್ಣು ಮುಚ್ಚಾಲಿಯಾಟ ವಿಶ ಸಾಗುತ್ತಿರುವ ಗಾಳಿ ಎಲ್ಲಾವು ಮಾನವ ನಿರ್ಮಿತ ಸಮಸ್ಯೆಗಳಾಗಿವೆ.ಈ ನಿಟ್ಟಿನಲ್ಲಿ ಗಿಡಗಳನ್ನು ನೆಡುವುದು ಮತ್ತು ಆಸಕ್ತರಿಗಿ ಗಿಡ ವಿತರಣೆಅಭಿನಂದನೀಯ  ಕಾರ್ಯಕ್ರಮ ಎಂದು ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಶ್ಲಾಘಿಸಿದರು.

ಅರ್ಕುಳ ಬೀಡು ಧರ್ಮದರ್ಶಿಗಳಾದಂತಹ ವಜ್ರನಾಭ ಶೆಟ್ಟಿ ಅವರು ಬಿಲ್ಲು ಪತ್ರ ಗಿಡವನ್ನು   ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಕಾರ್ಯಕ್ರಮದಲ್ಲಿ ಅರ್ಕುಳ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ರತ್ನರಾಜ್ಶೆಟ್ಟಿ,ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ|| ಜಯಕುಮಾರ್ ಶೆಟ್ಟಿ SDMC ಉಜಿರೆ, ಕಂಪ ಸದಾನಂದ ಅಲ್ವಾ,ಪರಿಸರ ಪ್ರೇಮಿ ಮಾಧವ ಉಲ್ಲಾಲ್, ಕೃಷಿಕ ಅಜಿತ್ ಕುಮಾರ್ ಶೆಟ್ಟಿ ,ಗ್ರಾಮ ಪಂಚಾಯತ್ ಸದಸ್ಯಸಂತೋಷ್ ಕುಮಾರ್ ತುಪ್ಪೆಕಲ್ಲು, ಸೇಸಪ್ಪ ಕರ್ಕೇರ ಧರ್ಮಗಿರಿ, ದಿನಕರ ಕರ್ಕೇರ ಮಂಟಮೆ ,ಕೃಷಿಕ ಉಮೇಶ್ ಸೇಮಿತ ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಮತ್ತು ಅರ್ಕುಳ ,ತುಪ್ಪೆಕಲ್ಲು ಮತ್ತು ಪರಂಗಿಪೇಟೆಯಸಮಸ್ತ ನಾಗರಿಕರು ನೆರೆದಿದ್ದರು.ಅರ್ಕುಳ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಸ್ವಸಹಾಯ ಗುಂಪುಗಳ ಪದಾಧಿಕಾರಿಗಳು ಸಹಕರಿಸಿದರು, ಈ ಕಾರ್ಯಕ್ರಮದಲ್ಲಿ ಪಾಲು ಪಡೆದಂತಹ ಆರ್ಕುಳ, ತುಪ್ಪೆಕಲ್ಲು ಹಾಗೂ ಫರಂಗಿಪೇಟೆ ಪರಿಸರದ ನಾಗರಿಕರಿಗೆ ಸಸಿಗಳನ್ನು ವಿತರಿಸಿ ನಂತರ ಬಿಲ್ಲು ಪತ್ರ, ನೇರಳೆ,ಸಂಪಿಗೆ ,ಮಾವು, ಹಲಸು ಹಾಗು ಗಂಧದಸಸಿಗಳನ್ನು ದೈವಸ್ಥಾನದ ವಠಾರದಲ್ಲಿ ಗಣ್ಯರ ಸಮ್ಮುಖದಲ್ಲಿ ನೆಡಲಾಯಿತು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...