Friday, January 30, 2026

ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ವನಮಹೋತ್ಸವ

ಬಂಟ್ವಾಳ: ಕರ್ನಾಟಕ ಅರಣ್ಯ ಇಲಾಖೆ, ಬಂಟ್ವಾಳ ವಲಯ ಮತ್ತು ಮಂಚಿ ಸಾವಿರದ ಅರಸು ಕುರಿಯಾಡಿತ್ತಾಯ ಸೇವಾ ಸಮಿತಿ ಇದರ ವತಿಯಿಂದ ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದಲ್ಲಿ ಜು.17ರಂದು ಹಸಿರು ಕರ್ನಾಟಕ ಯೋಜನೆಯಡಿಯಲ್ಲಿ ವನಮಹೋತ್ಸವ ನಡೆಯಿತು. ದೈವಸ್ಥಾನದ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಬಂಟ್ವಾಳ ಅರಣ್ಯ ವಲಯದ ಅರಣ್ಯ ರಕ್ಷಕ ದಯಾನಂದ , ಸೇವಾ ಸಮಿತಿ ಅಧ್ಯಕ್ಷರಾದ ವಿಠಲ ರೈ, ಬಾಲಾಜಿ ಬೈಲು, ಕಾರ್ಯದರ್ಶಿ ರಮೇಶ್ ರಾವ್ ಪತ್ತುಮುಡಿ, ರವಿ ಮಂಚಿಗುತ್ತು,ಉಮಾನಾಥ ರೈ ಮೇರಾವು, ಸುರೇಶ ಪೂಜಾರಿ, ಶ್ರೀಕಾಂತ್ ಪತ್ತುಮುಡಿ, ರಾಜೇಶ್ ಆಳ್ವ ಬಾಳಿಕೆ, ಜಯರಾಮ್ ರೈ ಭಟ್ರಬೈಲು, ವಿಶ್ವನಾಥ ಸಪಲ್ಯ, ನಾರಾಯಣ ಕೇಪುಳಗುರಿ, ಚಂದ್ರಹಾಸ , ಸತೀಶ್ ನಾವಡ ಮೊದಲಾದವರು ಉಪಸ್ಥಿತರಿದ್ದರು.

More from the blog

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...