Friday, July 11, 2025

ಸಜಿಪನಡು: ಜ. 6ರಂದು ವಾರದ ಸಂತೆ ಸಹಿತ ವಿವಿಧ ಯೋಜನೆಗಳ ಉದ್ಘಾಟನೆ, ಜ. 7ರಂದು ಉದ್ಯೋಗ ಮೇಳ

ಬಂಟ್ವಾಳ: ಸಜಿಪನಡು ಗ್ರಾಮ ಪಂಚಾಯತ್ ವತಿಯಿಂದ ಟಿ.ಆರ್. ಗ್ರೌಂಡ್ ಸಜಿಪ ಜಂಕ್ಷನ್ ಬಳಿ ವಾರದ ಸಜಿಪ ಸಂತೆ ಆರಂಭಗೊಳ್ಳಲಿದೆ. ಜ. 6ರಂದು ವಾರದ ಸಂತೆ ಸಹಿತ ವಿವಿಧ ಯೋಜನೆಗಳ ಉದ್ಘಾಟನೆ, ಜ. 7ರಂದು ಉದ್ಯೋಗಮೇಳ ಕಾರ್ಯಕ್ರಮಗಳು ನಡೆಯಲಿವೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸಿರ್ ಸಜೀಪ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ೩೨ ವರ್ಷಗಳಿಂದ ನಿಂತ್ತಿದ್ದ ಸಂತೆಯನ್ನು ಮತ್ತೆ ಪ್ರಾರಂಭಿಸಲಾಗುತ್ತಿದೆ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.
ವಿವಿಧ ಕಾರ್ಯಗಳು:
ಜ. 6ರಂದು ಬೆಳಗ್ಗೆ 8 ಗಂಟೆಗೆ ವಾರದ ಸಂತೆಯನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್. ಉದ್ಘಾಟಿಸುವರು. ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಮುಹಮ್ಮದ್, ಗುತ್ತಿಗೆದಾರ ಟಿ.ಆರ್.ಅಬ್ದುಲ್ ಖಾದರ್, ಎಸ್‌ಡಿಪಿಐ ಸಜಿಪನಡು ಅಧ್ಯಕ್ಷ ನವಾಝ್, ಸಜಿಪ ಕಾಂಗ್ರೆಸ್ ಸಜಿಪ ವಲಯ ಅಧ್ಯಕ್ಷ ಅಬೂಬಕ್ಕರ್. ಎಸ್, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ದೀಪಕ್ ಕೊಂಕಣ್‌ತೋಟ, ಜೆಡಿಎಸ್ ಗ್ರಾಮ ಅಧ್ಯಕ್ಷ ಸತ್ತಾರ್ ಹಾಜಿ, ಆಟೊ ಚಾಲಕ-ಮಾಲೀಕರ ಸಂಘದ ಅಧ್ಯಕ್ಷ ಎಸ್.ಕೆ.ಬಶೀರ್ ಮತ್ತು ಸಜಿಪನಡು ಹಾಗೂ ಇಸ್ಮಾಯಿಲ್ ಗೋಳಿಪಡ್ಪು ಇವರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಅಂದು ಬೆಳಗ್ಗೆ 9.30ಕ್ಕೆ ಪಂಚಾಯತ್ ಆವರಣದಲ್ಲಿ ಸಂಜೀವಿನಿ ಕಟ್ಟಡವನ್ನು ಸಚಿವ ಯು.ಟಿ.ಖಾದರ್ ಶಂಕುಸ್ಥಾಪನೆ ನೆರವೇರಿಸುವರು. ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವರು. ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸಿರ್ ಅಧ್ಯಕ್ಷತೆ ವಹಿಸುವರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಘನತ್ಯಾಜ್ಯ ವಿಲೇವಾರಿ ವಾಹನ ಉದ್ಘಾಟಿಸುವರು. ಜನರೆಡೆಗೆ ಪಂಚಾಯತ್ ಯೋಜನೆಯನ್ನು ಮಂಗಳೂರಿನ ಕಾರ್ಪೊರೇಟರ್ ಆಯಾಜ್ ಕೃಷ್ಣಾಪುರ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯರಾದ ಎಸ್.ಎನ್ ಅಬ್ದುಲ್ ರಹಿಮಾನ್, ಅಬ್ದುಲ್ ರಶೀದ್ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರಪ್ಪ ಗೌಡ ಎಸ್. ಉಪಸ್ಥಿತರಿದ್ದರು.

ಜ. 7ರಂದು ಉದ್ಯೋಗ ಮೇಳ:
ಜ.7ರಂದು ಬೆಳಿಗ್ಗೆ 9ಗಂಟೆಗೆ ಗ್ರಾಮ ಪಂಚಾಯತ್ ಕಛೇರಿ ಆವರಣದಲ್ಲಿ ಉದ್ಯೋಗ ಮೇಳ ಆರಂಭಗೊಳ್ಳಲಿದ್ದು, 10 ಗಂಟೆವರೆಗೆ ನೋಂದಣಿ ನಡೆಯಲಿದೆ. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸಿರ್ ವಹಿಸಲಿದ್ದು, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉದ್ಘಾಟಿಸುವರು ಎಂದು ಅವರು ಮಾಹಿತಿ ನೀಡಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...