Wednesday, July 9, 2025

ಗ್ರಾಮ‌ಕರಣೀಕನ ವರ್ಗಾವಣೆ ಮಾಡುವಂತೆ ಮನವಿ

ಬಂಟ್ವಾಳ: ಬಂಟ್ವಾಳ ಮೂಡ ಗ್ರಾಮದ ಗ್ರಾಮಕರಣೀಕ ಕರ್ತವ್ಯ ಲೋಪ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ ಮೂಡ ಗ್ರಾಮದ ನಾಗರೀಕರು ಈತನನ್ನು ಇಲ್ಲಿಂದ ಬೇರೆ ‌ಕಡೆಗೆ ವರ್ಗಾವಣೆ ಮಾಡಿ ಎಂದು ಒತ್ತಾಯಿಸಿ ಶಾಸಕ ರಾಜೇಶ್ ನಾಯಕ್ ಮತ್ತು ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ ಅವರಿಗೆ ಮನವಿ ನೀಡಿದ್ದಾರೆ.


ಬಂಟ್ವಾಳ ಮೂಡ ಗ್ರಾಮದಲ್ಲಿ ಪ್ರಸ್ತುತ ಗ್ರಾಮ ಕರಣೀಕರಾಗಿ ಕೆಲಸ ಮಾಡುತ್ತಿರುವ ಶಿವಾನಂದ ಎಂಬವರು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ಗ್ರಾಮಸ್ಥರ ಕಡತವನ್ನು ಬಿಸಾಡಿ ಅವಮಾನ ಮಾಡುವ ಜೊತೆಗೆ ಸಾರ್ವಜನಿಕ ರಿಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ.‌
ಜೊತೆಗೆ ಸಾರ್ವಜನಿಕರಲ್ಲಿ ಉಡಾಪೆ ಹಾಗೂ ದರ್ಪದಲ್ಲಿ ಮಾತನಾಡುತ್ತಿದ್ದಾರೆ, ಜನರ ಕೆಲಸ ಮಾಡದೆ ನಿರ್ಲಕ್ಷ್ಯ ‌ಮಾಡುತ್ತಿದ್ದಾರೆ , ಈತನ ವರ್ತನೆಯಿಂದ ಜನ ರೋಸಿ ಹೋಗಿದ್ದಾರೆ. ಹಾಗಾಗಿ ಕೂಡಲೇ ಈತನನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಕುರಿತು ತಾಲೂಕು ಕಛೇರಿ ಮುಂಭಾಗದಲ್ಲಿ ಧರಣಿ ನಡೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯರದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಮಾಜಿ ಪುರಸಭಾ ಸದಸ್ಯ ಗೋಪಾಲ ಸುವರ್ಣ, ಕಲೀಲ್ ಬಿ.ಸಿ.ರೋಡ್, ಮತ್ತಿತರರು ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...