Wednesday, February 12, 2025

ಗ್ರಾಮ‌ಕರಣೀಕನ ವರ್ಗಾವಣೆ ಮಾಡುವಂತೆ ಮನವಿ

ಬಂಟ್ವಾಳ: ಬಂಟ್ವಾಳ ಮೂಡ ಗ್ರಾಮದ ಗ್ರಾಮಕರಣೀಕ ಕರ್ತವ್ಯ ಲೋಪ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ ಮೂಡ ಗ್ರಾಮದ ನಾಗರೀಕರು ಈತನನ್ನು ಇಲ್ಲಿಂದ ಬೇರೆ ‌ಕಡೆಗೆ ವರ್ಗಾವಣೆ ಮಾಡಿ ಎಂದು ಒತ್ತಾಯಿಸಿ ಶಾಸಕ ರಾಜೇಶ್ ನಾಯಕ್ ಮತ್ತು ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ ಅವರಿಗೆ ಮನವಿ ನೀಡಿದ್ದಾರೆ.


ಬಂಟ್ವಾಳ ಮೂಡ ಗ್ರಾಮದಲ್ಲಿ ಪ್ರಸ್ತುತ ಗ್ರಾಮ ಕರಣೀಕರಾಗಿ ಕೆಲಸ ಮಾಡುತ್ತಿರುವ ಶಿವಾನಂದ ಎಂಬವರು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ಗ್ರಾಮಸ್ಥರ ಕಡತವನ್ನು ಬಿಸಾಡಿ ಅವಮಾನ ಮಾಡುವ ಜೊತೆಗೆ ಸಾರ್ವಜನಿಕ ರಿಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ.‌
ಜೊತೆಗೆ ಸಾರ್ವಜನಿಕರಲ್ಲಿ ಉಡಾಪೆ ಹಾಗೂ ದರ್ಪದಲ್ಲಿ ಮಾತನಾಡುತ್ತಿದ್ದಾರೆ, ಜನರ ಕೆಲಸ ಮಾಡದೆ ನಿರ್ಲಕ್ಷ್ಯ ‌ಮಾಡುತ್ತಿದ್ದಾರೆ , ಈತನ ವರ್ತನೆಯಿಂದ ಜನ ರೋಸಿ ಹೋಗಿದ್ದಾರೆ. ಹಾಗಾಗಿ ಕೂಡಲೇ ಈತನನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಕುರಿತು ತಾಲೂಕು ಕಛೇರಿ ಮುಂಭಾಗದಲ್ಲಿ ಧರಣಿ ನಡೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯರದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಮಾಜಿ ಪುರಸಭಾ ಸದಸ್ಯ ಗೋಪಾಲ ಸುವರ್ಣ, ಕಲೀಲ್ ಬಿ.ಸಿ.ರೋಡ್, ಮತ್ತಿತರರು ಉಪಸ್ಥಿತರಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...