Thursday, January 29, 2026

ವೀರಕಂಬ: ದ.ಕ. ಜಿ. ಪಂ. ಹಿ. ಪ್ರಾ. ಶಾಲೆಯ ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ

ಬಂಟ್ವಾಳ: ಕೋವಿಡ್ ವೈರಸ್ ಹಾಗೂ ಲಾಕ್‍ಡೌನ್ ಕಾರಣದಿಂದ ಸ್ಥಗಿತಗೊಂಡಿರುವ ಶಿಕ್ಷಣ ವ್ಯವಸ್ಥೆಗೆ ಪುನರ್ ಜೀವ ನೀಡುವ ಹಾಗೂ ಮಕ್ಕಳ ಕಲಿಕಾ ಸಾಮಥ್ಯ೯ಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಶಿಕ್ಷಣ ಇಲಾಖೆಯ ವಿನೂತನ ಕಾಯ೯ಕ್ರಮ ‘ವಿದ್ಯಾಗಮ’ದ ಅನುಷ್ಠಾನದ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ವಿದ್ಯಾರ್ಥಿಗಳಿಗೆ ವೀರಕಂಬ ಗ್ರಾಮ ವ್ಯಾಪ್ತಿಯ ವಿವಿಧೆಡೆ ಕಲಿಕಾ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಸ್ಥಳ ಗುರುತಿಸಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾ ಮನಸ್ಥಿತಿಗೆ ಪೂರಕವಾಗಿ ತರಗತಿ ನಡೆಸುತ್ತಿದ್ದಾರೆ.

ಇದೇ ಅಲ್ಲದೆ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮವೂ ನಡೆಯುತ್ತಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾತೃಶ್ರೀ ಗೆಳೆಯರ ಬಳಗ ವೀರಕಂಭದಲ್ಲಿ ಕಲ್ಲಡ್ಕ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಮೆಟಿಲ್ಡಾ ಲೋಬೊ ಉದ್ಘಾಟಿಸಿ, ಶಿಕ್ಷಕರೊಂದಿಗೆ ವಿದ್ಯಾರ್ಥಿಗಳ ಪೋಷಕರು ಕೂಡ ಈ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಮುಖ್ಯಶಿಕ್ಷಕ ನಾರಾಯಣ ಪೂಜಾರಿ ವಿದ್ಯಾಗಮದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಅವರು ಗುಡ್ಡೆತೋಟ ,ಸಿಂಗೇರಿ, ಗಿಳ್ಕಿಂಜ, ನಂದಂತಿಮಾರು, ಪ್ರದೇಶದ ಮಕ್ಕಳಿಗೆ, ಶಿಕ್ಷಕಿ ಶಕುಂತಲಳಾ. ಎಂ.ಬಿ. ಕಂಪದ ಬೈಲು, ಕೋಡಪದವು, ತಾಳಿತ್ತನೂಜಿ, ಮಜಿ, ಮಜ್ಜೋನಿ ಪ್ರದೇಶದ ಮಕ್ಕಳಿಗೆ, ಶಿಕ್ಷಕಿ ಸಿಸಿಲಿಯ, ಎಮೆ೯ಮಜಲು, ನಕ್ಕರಾಜೆ, ಗಣೇಶ್ ಕೊಡಿ,  ಪ್ರದೇಶದ ಮಕ್ಕಳಿಗೆ, ಶಿಕ್ಷಕಿ ಸಂಗೀತ ಶರ್ಮ, ಬಾಯಿಲ ಅರೆಬೆಟ್ಟು, ಮಜಿ ಬೆತ್ತ ಸರವು, ಕೆಮ್ಮಟೆ, ಕುಮೇರು, ವೀರಕಂಬ, ಕೇಪುಳ ಕೊಡಿ ವ್ಯಾಪ್ತಿಯ ಮಕ್ಕಳಿಗೆ, ಶಿಕ್ಷಕಿ ಅನುಷಾ, ಕೆಲಿಂಜ, ಪೆಲತ್ತಡ್ಕ, ಬೆಂಜನತಿಮಾರು, ಪಾತ್ರ ತೋಟ, ಮಂಗಿಲಪದವು ಮಕ್ಕಳಿಗೆ, ಶಿಕ್ಷಕಿ ಮುರ್ಷೀದಾ ಬಾನು, ಮೈರ, ಕೊಂಬಿಲ, ಅನಂತಾಡಿ, ಚಾಕೊಟೆ ಮಾರು ವ್ಯಾಪ್ತಿಯ ಮಕ್ಕಳಿಗೆ, ಹಾಗೂ ಅತಿಥಿ ಶಿಕ್ಷಕಿಯರಾದ ಜಯಲಕ್ಷ್ಮಿ ಹಾಗೂ ಶ್ವೇತಾ ಎಲ್ಲಾ ಶಿಕ್ಷಕರ ಜೊತೆ ಸೇರಿಕೊಂಡು ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮ ಪಡುತ್ತಿದ್ದಾರೆ.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು ತಮ್ಮ ವ್ಯಾಪ್ತಿಯಲ್ಲಿ  ಶಿಕ್ಷಕರ ಜೊತೆ ಕೈಜೋಡಿಸಿದ್ದಾರೆ. ಊರಿನ ಮಕ್ಕಳ ಪೋಷಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಾ ಇದ್ದು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ಕಾರ್ಯಕ್ರಮಗಳು ನಡೆಯುತ್ತಿವೆ. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...