Thursday, February 13, 2025

ವೀರಕಂಬ: ತಡೆಗೋಡೆ ಕುಸಿತ: ಸಂಪರ್ಕ ಕಡಿತದ ಭೀತಿ

ವಿಟ್ಲ: ಕಳೆದ 5 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ವಿಟ್ಲ ಸಮೀಪದ ವೀರಕಂಬದಿಂದ ಬೋಳಂತೂರು ಸಂಪರ್ಕಿಸುವ ರಸ್ತೆ ಬದಿಯ ತೋಡಿನ ತಡೆಗೋಡೆ ಕುಸಿದು ಬಿದ್ದು ಸಂಪರ್ಕ ಕಳೆದುಕೊಳ್ಳುವ ಭೀತಿಯಲ್ಲಿ ಜನರು ದಿನದೂಡುವಂತಾಗಿದೆ.
ವೀರಕಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಕಂಬದಿಂದ ಬೋಳಂತೂರು, ಎನ್.ಸಿ ರೋಡ್, ಮಂಚಿ ಸಂಪರ್ಕಿಸುವ ರಸ್ತೆಯ ಒದು ಬದಿಯಲ್ಲಿ ತೋಡಿನಲ್ಲಿ ನೀರು ಹರಿಯುತ್ತಿದ್ದು, ತೋಡಿಗೆ ಕಟ್ಟಲಾದ ತಡೆಗೋಡೆ ಸಂಪೂರ್ಣವಾಗಿ ಹದಗೆಟ್ಟಿದ್ದು,ಇದೀಗ ನೀರಿನ ತೀವ್ರತೆಗೆ ಕುಸಿದು ಬಿದ್ದಿದೆ. ಇದರಿಂದ ಸಂಚಾರ ದುಸ್ಸಾಹವಾಗಿದೆ.
ಇಲ್ಲಿನ ಒಳ ರಸ್ತೆ ಅಸಮರ್ಪಕ ಕಾಮಗಾರಿಯಿಂದ ರಸ್ತೆ ಇದೀಗ ಸಂಪೂರ್ಣವಾಗಿ ಹೊಂಡಗಳಿಂದ ಹಾಳಾಗಿ ಪ್ರಯಾಣಿಕರು ಹೊಂಡಗಳ ನಡುವೆ ರಸ್ತೆಯನ್ನು ಹುಡುಕುವ ಪರಿಸ್ಥಿತಿ ಎದುರಾಗಿದೆ.
ತಡೆಗೋಡೆ ಕುಸಿದ ಪರಿಣಾಮ ರಸ್ತೆ ಬದಿಯು ಕುಸಿಯುವ ಭೀತಿ ಎದುರಾಗಿದೆ. ಪಾದಚಾರಿಗಳಿಗೆ ನಡೆಯುವುದು ನರಕ ಸಂಕಟವಾಗಿದೆ. ಮಕ್ಕಳು, ಹಿರಿಯರು, ಮಹಿಳೆಯರು ಜೀವಭಯದಲ್ಲಿ ಸಂಚರಿಸುವ ಸನ್ನಿವೇಶ ಸೃಷ್ಟಿಯಾಗಿದೆ.
ಸುತ್ತಮುತ್ತಲೂ ನೂರಕ್ಕಿಂತಲೂ ಅಧಿಕ ಮನೆ ಇದೆ. ಈ ಬಗ್ಗೆ ವೀರಕಂಬ ಅಧ್ಯಕ್ಷರು, ಪಿಡಿಒ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳುವ ಸಾಧ್ಯತೆಯಿದ್ದು, ಅಧಿಕಾರಿಗಳು ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...