Thursday, July 10, 2025

ಒಡ್ಡೂರು ಫಾರ್ಮ್ಸ್‌ನಲ್ಲಿ ಬಂಟ್ವಾಳ ಪ್ರಿಂಟರ್‍ಸ್ ಎಸೋಸಿಯೇಶನ್‌ನಿಂದ ವಿದ್ಯಾನಿಧಿ ವಿತರಣೆ

ಬಂಟ್ವಾಳ : ಮುದ್ರಣ ರಂಗದಲ್ಲಿ ಸಮಾನತೆ ಇರಬೇಕು. ಎಲ್ಲರೂ ಒಂದೇ ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ಮಾತ್ರ ಮಾಡಿದ ಸಂಘಟನೆಗೊಂದು ಅರ್ಥ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅಸಂಘಟಿತ ಮುದ್ರಣ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎನ್. ರಾಜೇಂದ್ರ ಬಂಗೇರ ತಿಳಿಸಿದರು.
ಅವರು ಭಾನುವಾರ ಒಡ್ಡೂರು ಫಾರ್ಮ್ಸ್‌ನಲ್ಲಿ ನಡೆದ ಬಂಟ್ವಾಳ ತಾಲೂಕಿನ ಮುದ್ರಣ ಸಂಸ್ಥೆಯ ಮಾಲಕ ಹಾಗೂ ಕಾರ್ಮಿಕರಿಗೆ ನೀಡಿದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಹೆಚ್ಚಿನ ಭಾಗದಲ್ಲಿ ಮುದ್ರಣ ಕ್ಷೇತ್ರದ ಮಾಲಕರು ಇನ್ನೂ ಸಂಘಟಿತರಾಗಿಲ್ಲ. ಹೀಗಾಗಿ ಈ ಉದ್ಯಮದಲ್ಲಿ ಕೆಲಸ ಮಾಡುವವರು ತುಂಬಾ ಕಷ್ಟದ ಪರಿಸ್ಥಿಯಲ್ಲೇ ಬದುಕುವ ಸನ್ನಿವೇಶ ಎದುರಾಗಿದೆ. ಎಲ್ಲರೂ ಅಸೋಸಿಯೇಶನ್ ನಿರ್ಧರಿಸಿದ ಬೆಲೆಗೆ ಮುದ್ರಣ ಮಾಡಿಕೊಟ್ಟರೆ ಯಾರಿಗೂ ನಷ್ಟವಾಗುವುದಿಲ್ಲ ಎಂದರು.
ವಿದ್ಯಾನಿಧಿ ಬಿಡುಗಡೆ : ಮುದ್ರಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಬಂಟ್ವಾಳ ಪ್ರಿಂಟರ್‍ಸ್ ಎಸೋಸಿಯೇಶನ್‌ನ ವತಿಯಿಂದ ವಿದ್ಯಾರ್ಥಿಗಳ ವಿದ್ಯಾನಿಧಿಯೋಜನೆಯನ್ನು ಈ ವರ್ಷ ಸ್ಥಾಪಿಸಲಾಯಿತು. ಅದಕ್ಕೆ ಪೂರಕವಾದ ವಿಜ್ಞಾಪನಾ ಪತ್ರವನ್ನು ಸ್ಥಾಪಕಾದ್ಯಕ್ಷ ಲಿಯೋ ಬಾಸಿಲ್ ಫೆರ್ನಾಂಡಿಸ್ ಬಿಡುಗಡೆಗೊಳಿಸಿದರು. ನಂತರ ಅರ್ಹ ಆರು ವಿದ್ಯಾರ್ಥಿಗಳಾದ ಮೊಡಂಕಾಪು ಇನ್‌ಫೆಂಟ್ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಆದರ್ಶ್, ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಸಚಿನ್, ಮಾಣಿ ಬಾಲವಿಕಾಸ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಅಂಕಿತ್, ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಪೇಕ್ಷಾ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹರ್ಷಿತಾ, ಕೊಯಿಲ ಸರಕಾರಿ ಪ್ರೌಢ ಶಾಲೆ ೭ನೇ ತರಗತಿ ವಿದ್ಯಾರ್ಥಿ ದೀಕ್ಷಿತಾರವರಿಗೆ ವಿದ್ಯಾರ್ಥಿವೇತನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಅಸೋಸಿಯೇಶನ್‌ನ ಅಧ್ಯಕ್ಷ ಈಶ್ವರ ಕುಮಾರ್ ಭಟ್ ಎಸ್. ವಹಿಸಿದ್ದರು. ಬೇಬಿ ವೈಷ್ಣವಿ ವೈ.ಕೆ. ಪ್ರಾರ್ಥನೆ ಮಾಡಿದರು. ಕಾರ್ಯಕಾರಿ ಸಮಿತಿ ಸದಸ್ಯ ರಘುವೀರ್ ಕಾರ್ತಿಕ್ ಸ್ವಾಗತಿಸಿದರು. ಗೌರವ ಸಲಹೆಗಾರ ರಾಮದಾಸ್ ಬಂಟ್ವಾಳ ಪ್ರಸ್ತಾವನೆಗೈದರು. ಯಾದವ ಕುಲಾಲ್ ಧನ್ಯವಾದ ಮಾಡಿದರು. ಕವಿತಾ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ನವೀನ್ ಕುಮಾರ್, ಉಪಾಧ್ಯಕ್ಷ ವಿದ್ಯಾದರ ಜೈನ್, ಅಸೋಸಿಯೇಶನ್‌ನ ಪದಾಧಿಕಾರಿಗಳಾದ ದಿನೇಶ್ ತುಂಬೆ, ನಾಗರಾಜ್ ಕಾರಿಂಜ, ವೆಂಕಟ್ರಮಣ ಕಲ್ಲಡ್ಕ, ಹರೀಶ್ ಕಲ್ಲಡ್ಕ, ಮಾಧವ ಬ್ರಹ್ಮರಕೂಟ್ಲು, ಮಂಜಪ್ಪ ಅರಳ, ತಿಮ್ಮಪ್ಪ ನರಿಕೊಂಬು, ಸಂಧ್ಯಾ ಸಿದ್ದಕಟ್ಟೆ, ಸುರೇಶ್ ಬೆಂಜನಪದವು, ಕೇಶವ ಬಂಟ್ವಾಳ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...