Saturday, February 8, 2025

ಒಡ್ಡೂರು ಫಾರ್ಮ್ಸ್‌ನಲ್ಲಿ ಬಂಟ್ವಾಳ ಪ್ರಿಂಟರ್‍ಸ್ ಎಸೋಸಿಯೇಶನ್‌ನಿಂದ ವಿದ್ಯಾನಿಧಿ ವಿತರಣೆ

ಬಂಟ್ವಾಳ : ಮುದ್ರಣ ರಂಗದಲ್ಲಿ ಸಮಾನತೆ ಇರಬೇಕು. ಎಲ್ಲರೂ ಒಂದೇ ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ಮಾತ್ರ ಮಾಡಿದ ಸಂಘಟನೆಗೊಂದು ಅರ್ಥ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅಸಂಘಟಿತ ಮುದ್ರಣ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎನ್. ರಾಜೇಂದ್ರ ಬಂಗೇರ ತಿಳಿಸಿದರು.
ಅವರು ಭಾನುವಾರ ಒಡ್ಡೂರು ಫಾರ್ಮ್ಸ್‌ನಲ್ಲಿ ನಡೆದ ಬಂಟ್ವಾಳ ತಾಲೂಕಿನ ಮುದ್ರಣ ಸಂಸ್ಥೆಯ ಮಾಲಕ ಹಾಗೂ ಕಾರ್ಮಿಕರಿಗೆ ನೀಡಿದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಹೆಚ್ಚಿನ ಭಾಗದಲ್ಲಿ ಮುದ್ರಣ ಕ್ಷೇತ್ರದ ಮಾಲಕರು ಇನ್ನೂ ಸಂಘಟಿತರಾಗಿಲ್ಲ. ಹೀಗಾಗಿ ಈ ಉದ್ಯಮದಲ್ಲಿ ಕೆಲಸ ಮಾಡುವವರು ತುಂಬಾ ಕಷ್ಟದ ಪರಿಸ್ಥಿಯಲ್ಲೇ ಬದುಕುವ ಸನ್ನಿವೇಶ ಎದುರಾಗಿದೆ. ಎಲ್ಲರೂ ಅಸೋಸಿಯೇಶನ್ ನಿರ್ಧರಿಸಿದ ಬೆಲೆಗೆ ಮುದ್ರಣ ಮಾಡಿಕೊಟ್ಟರೆ ಯಾರಿಗೂ ನಷ್ಟವಾಗುವುದಿಲ್ಲ ಎಂದರು.
ವಿದ್ಯಾನಿಧಿ ಬಿಡುಗಡೆ : ಮುದ್ರಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಬಂಟ್ವಾಳ ಪ್ರಿಂಟರ್‍ಸ್ ಎಸೋಸಿಯೇಶನ್‌ನ ವತಿಯಿಂದ ವಿದ್ಯಾರ್ಥಿಗಳ ವಿದ್ಯಾನಿಧಿಯೋಜನೆಯನ್ನು ಈ ವರ್ಷ ಸ್ಥಾಪಿಸಲಾಯಿತು. ಅದಕ್ಕೆ ಪೂರಕವಾದ ವಿಜ್ಞಾಪನಾ ಪತ್ರವನ್ನು ಸ್ಥಾಪಕಾದ್ಯಕ್ಷ ಲಿಯೋ ಬಾಸಿಲ್ ಫೆರ್ನಾಂಡಿಸ್ ಬಿಡುಗಡೆಗೊಳಿಸಿದರು. ನಂತರ ಅರ್ಹ ಆರು ವಿದ್ಯಾರ್ಥಿಗಳಾದ ಮೊಡಂಕಾಪು ಇನ್‌ಫೆಂಟ್ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಆದರ್ಶ್, ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಸಚಿನ್, ಮಾಣಿ ಬಾಲವಿಕಾಸ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಅಂಕಿತ್, ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಪೇಕ್ಷಾ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹರ್ಷಿತಾ, ಕೊಯಿಲ ಸರಕಾರಿ ಪ್ರೌಢ ಶಾಲೆ ೭ನೇ ತರಗತಿ ವಿದ್ಯಾರ್ಥಿ ದೀಕ್ಷಿತಾರವರಿಗೆ ವಿದ್ಯಾರ್ಥಿವೇತನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಅಸೋಸಿಯೇಶನ್‌ನ ಅಧ್ಯಕ್ಷ ಈಶ್ವರ ಕುಮಾರ್ ಭಟ್ ಎಸ್. ವಹಿಸಿದ್ದರು. ಬೇಬಿ ವೈಷ್ಣವಿ ವೈ.ಕೆ. ಪ್ರಾರ್ಥನೆ ಮಾಡಿದರು. ಕಾರ್ಯಕಾರಿ ಸಮಿತಿ ಸದಸ್ಯ ರಘುವೀರ್ ಕಾರ್ತಿಕ್ ಸ್ವಾಗತಿಸಿದರು. ಗೌರವ ಸಲಹೆಗಾರ ರಾಮದಾಸ್ ಬಂಟ್ವಾಳ ಪ್ರಸ್ತಾವನೆಗೈದರು. ಯಾದವ ಕುಲಾಲ್ ಧನ್ಯವಾದ ಮಾಡಿದರು. ಕವಿತಾ ಯಾದವ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ನವೀನ್ ಕುಮಾರ್, ಉಪಾಧ್ಯಕ್ಷ ವಿದ್ಯಾದರ ಜೈನ್, ಅಸೋಸಿಯೇಶನ್‌ನ ಪದಾಧಿಕಾರಿಗಳಾದ ದಿನೇಶ್ ತುಂಬೆ, ನಾಗರಾಜ್ ಕಾರಿಂಜ, ವೆಂಕಟ್ರಮಣ ಕಲ್ಲಡ್ಕ, ಹರೀಶ್ ಕಲ್ಲಡ್ಕ, ಮಾಧವ ಬ್ರಹ್ಮರಕೂಟ್ಲು, ಮಂಜಪ್ಪ ಅರಳ, ತಿಮ್ಮಪ್ಪ ನರಿಕೊಂಬು, ಸಂಧ್ಯಾ ಸಿದ್ದಕಟ್ಟೆ, ಸುರೇಶ್ ಬೆಂಜನಪದವು, ಕೇಶವ ಬಂಟ್ವಾಳ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...