Wednesday, January 28, 2026

ರಸ್ತೆಯಲ್ಲಿ ಸೇರಿದ ಜನರಿಗೆ ಲಾಠಿ ರುಚಿ ತೋರಿಸಿದ ವಿಟ್ಲ ಎಸ್.ಐ .ವಿನೋದ್ ರೆಡ್ಡಿ

ಬಂಟ್ವಾಳ: ರಾಜ್ಯ ಇಡೀ ಲಾಕ್ ಡೌನ್ ಮಾಡಬೇಕು ಎಂದು ಸರಕಾರ ಅದೇಶ ಮಾಡಿದರೂ ಜನ ಮಾತ್ರ ಇನ್ನೂ ಕೂಡ ಎಚ್ಚೆತ್ತುಕೊಂಡಿಲ್ಲ.
ಮನೆಯಿಂದ ಯಾರು ಕೂಡ ಹೊರಗೆ ಬರಬೇಡಿ, ಅಗತ್ಯ ವಸ್ತಗಳಿಗೆ ಮಾತ್ರ ಅಂಗಡಿಗೆ ಬನ್ನಿ ಎಂದು ಹೇಳಿದರು ಜನ ರಸ್ತೆಯಲ್ಲಿ ತಿರುಗಾಟ ಕಡಿಮೆಯಾಗಿಲ್ಲ…
ಇಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ವರೆಗೆ ಮಾತ್ರ ಅವಶ್ಯ ಅಂಗಡಿಗಳು ತೆರದಿರುತ್ತದೆ ಅ ಹೊತ್ತಿನಲ್ಲಿ ಸಾಮಾಗ್ರಿಗಳನ್ನು ಖರೀದಿ ಮಾಡಿ ಮನೆಗೆ ಸೇರುವಂತೆ ಜಿಲ್ಲಾಡಳಿತ ಅದೇಶ ಮಾಡಿತ್ತು.
ಆದರೆ ಬಂಟ್ವಾಳ ತಾಲೂಕಿನ ವಿವಿಧ ಕಡೆಯಲ್ಲಿ ಜನ ಮಾತ್ರ ಸಂಜೆಯಾಗುತ್ತಲೆ ಮನೆ ಬಿಟ್ಟು ಪೇಟೆ ಸೇರಿದ್ದರು.
ಜಿಲ್ಲಾಡಳಿತದ ಮಾತಿಗೆ ಬೆಲೆ ಕೊಡದೆ ರಸ್ತೆಗೆ ಬಂದಿದ್ದ ಜನರಿಗೆ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಅವರು ಬೆತ್ತದ ರುಚಿ ತೋರಿಸಿದರು.
ವಿಟ್ಲ ಪೇಟೆ, ಮಾಣಿ, ಉಕ್ಕುಡ ಹಾಗೂ ಬುಡೋಳಿ ಪೇಟೆಯಲ್ಲಿ ಜನ ಸೇರಿದ್ದ ಬಗ್ಗೆ ಮಾಹಿತಿ ಪಡೆದ ಎಸ್.ಐ.ಅವರು ಲಾಠಿ ಬೀಸಿದ್ದಾರೆ.
ಕೊರೊನೊ ವೈರಸ್ ಜಾಗೃತಿಗಾಗಿ ಮನೆ ಬಿಟ್ಟು ತೆರಳದಂತೆ ತಾಲೂಕು ಆಡಳಿತ ಮನವಿ ಮಾಡಿಕೊಂಡರು ಜನರು ಕಿವಿಗೊಡದ ಹಿನ್ನೆಲೆಯಲ್ಲಿ ಲಾಠಿ ಬೀಸಿದ್ದಾರೆ.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...