Monday, January 26, 2026

ವಿಶುಕುಮಾರ್ ಪ್ರಶಸ್ತಿಗೆ ಡಾ. ಬಿ. ಜನಾರ್ದನ ಭಟ್ ಆಯ್ಕೆ

 

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ವತಿಯಿಂದ ಪ್ರತಿವರ್ಷ ನೀಡಲಾಗುವ ಪ್ರತಿಷ್ಠಿತ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿಗೆ ಈ ವರ್ಷ ಖ್ಯಾತ ವಿಮರ್ಶಕ ಹಾಗೂ ಸಾಹಿತಿ ಡಾ.ಬಿ.ಜನಾರ್ದನ ಭಟ್ ಆಯ್ಕೆಯಾಗಿದ್ದಾರೆ.
ದಿನಾಂಕ 04-04-1959 ರಂದು ಬೆಳ್ಮಣ್ಣುವಿನಲ್ಲಿ ಜನಿಸಿದ ಡಾ.ಬಿ.ಜನಾರ್ದನ ಭಟ್ ರವರು ಕನ್ನಡ ಸಾಹಿತ್ಯ ಲೋಕದ ಓರ್ವ ಪ್ರಸಿದ್ಧ ವಿಮರ್ಶಕ ಹಾಗೂ ಬರಹಗಾರರು. ಇದುವರೆಗೆ ಸುಮಾರು 90 ಕ್ಕಿಂತಲೂ ಹೆಚ್ಚು ಕೃತಿಗಳನ್ನು ರಚಿಸಿದ ಹಿರಿಮೆ ಇವರದು.
ಏಳು ಕಾದಂಬರಿಗಳು, ಆರು ಕಥಾ ಸಂಕಲನಗಳು ಜೊತೆಗೆ ಮೂವತ್ತಕ್ಕಿಂತಲೂ ಅಧಿಕ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಇಪ್ಪತ್ತೆರಡು ಅನುವಾದಿತ ಕೃತಿಗಳು ಹಾಗೂ ಇಪ್ಪತ್ತೊಂದು ಸಂಪಾದಿತ ಕೃತಿಗಳನ್ನು ಸಾಹಿತ್ಯ ಪ್ರಪಂಚಕ್ಕೆ ನೀಡಿದವರು ಡಾ.ಬಿ.ಜನಾರ್ದನ ಭಟ್.
ಕನ್ನಡ ಸಾಹಿತ್ಯ ಪ್ರಪಂಚದ ಓರ್ವ ಪ್ರಬುದ್ಧ ಬರಹಗಾರರಾದ ಡಾ.ಬಿ.ಜನಾರ್ದನ ಭಟ್ ರವರನ್ನು ಅವರ ಸಮಗ್ರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯು ಈ ಬಾರಿಯ ವಿಶುಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ದಿನಾಂಕ 02-10-2022 ರಂದು ಮಾಣಿಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...