Sunday, June 29, 2025

ವಿಶ್ವಕರ್ಮ ಪೂಜಾ ಮಹೋತ್ಸವ ಸಮುದಾಯ ಭವನ ನಿರ್ಮಾಣ ದೊಡ್ಡ ಸಾಧನೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:  ವಿಶ್ವಕರ್ಮ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಗಿರುವ ಸಮುದಾಯ ಭವನ ನಿರ್ಮಾಣ ದೊಡ್ಡ ಸಾಧನೆ. ಒಂದು ಸಮಾಜದಲ್ಲಿ ಕೆಲವರು ಶ್ರೀಮಂತರು, ಕೊಡುಗೈದಾನಿಗಳು ಇರುತ್ತಾರೆ. ಅವರ ಕೊಡುಗೆಯನ್ನು ಸ್ವೀಕರಿಸಿ ಸಮಾಜಕ್ಕೆ ಒಂದು ಆಸರೆಯನ್ನು ನಿರ್ಮಿಸಿಕೊಳ್ಳುವ ನಿಮ್ಮ ಸಾಧನೆಯು ಅಭಿನಂದನಾರ್ಹ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಸೆ. 17ರಂದು ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಜೋಡುಮಾರ್ಗ ಆಶ್ರಯದಲ್ಲಿ ಅಮ್ಟಾಡಿ ಅಜಕಲ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ 26ನೇ ವರ್ಷದ ವಿಶ್ವಕರ್ಮ ಪೂಜಾ ಮಹೋತ್ಸವದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಯಾವುದೇ ಶಿಲೆ ದೇವರ ಮೂರ್ತಿಯಾಗುವುದು ವಿಶ್ವಕರ್ಮರ ಪ್ರಯತ್ನದಿಂದ. ಮರ ಮತ್ತು ಲೋಹವು ಒಂದು ಸುಂದರ ಚಿತ್ರಣವಾಗಿ ಬದಲಾವಣೆ ಆಗುವುದು ವಿಶ್ವಕರ್ಮರ ಸಾಧನೆಗಳಿಂದ. ಸಮಾಜಕ್ಕೆ ಅವರ ಕೊಡುಗೆ ಅನಾಽಯಿಂದ ಇಂದಿನ ತನಕವೂ ಪರಂಪರೆಯಿಂದ ಹರಿದು ಬಂದಿದೆ. ಕಲೆ ವಿಶ್ವಕರ್ಮರ ರಕ್ತದಲ್ಲಿ ಬೆಳೆದು ಬಂದಿದೆ ಎಂದು ಅಭಿನಂದಿಸಿದರು. ಸಮಾಜದ ಅಭಿವೃದ್ದಿಗಾಗಿ ಮಾಡಿರುವ 25 ಲಕ್ಷದ ಬೇಡಿಕೆಯನ್ನು ಸರಕಾರದ ಮಟ್ಟದಲ್ಲಿ ಮಂಜೂರು ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
ಸಭಾಧ್ಯಕ್ಷತೆ ವಹಿಸಿದ್ದ ಲ| ಸುಧಾಕರ ಆಜಾರ್ಯ ಮಾರ್ನಬೈಲು ಮಾತನಾಡಿ ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕು. ಸಮಾಜವು ನಮಗೇನು ಕೊಟ್ಟಿದೆ ಎಂಬ ಧ್ವನಿ ಬರಲಾಗದು. ಸಮಾಜಕ್ಕೆ ನೀಡಿದ ಕೊಡುಗೆಯ ಪ್ರತಿಫಲ ನಮಗೇ ಸಂದಾಯ ಆಗುವುದು. ಸಂಘದ ಸಭಾಂಗಣ ನಿರ್ಮಾಣಕ್ಕೆ ಸರಕಾರದಿಂದ ದೊಡ್ಡ ಸಹಾಯ ಆಗಿದೆ ಎಂದು ತಿಳಿಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ವಿಶ್ವಕರ್ಮರು ಸುಸಂಸ್ಕೃತ ಸಾಮಾಜಿಕ ಸ್ಥಾನಮಾನ ಹೊಂದಿದ್ದಾರೆ. ಎಲ್ಲರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಪ್ರಗತಿಪರ ಚಿಂತನೆಯ ಕಾರಣ ವಿಶ್ವಕರ್ಮ ಸಮಾಜಕ್ಕೆ ಇಂತಹ ಒಂದು ಸಮುದಾಯ ಭವನ ಕಟ್ಟುವ ಅವಕಾಶ ಆಗಿದೆ. ಸರಕಾರದ ಮಟ್ಟದಲ್ಲಿ ಅನುದಾನ ಕೊಡಿಸಲು ಪ್ರಯತ್ನಿಸಿದ್ದು ಅದರ ಸದುಪಯೋಗ ಪಡೆದಿದ್ದಾರೆ ಎಂದು ಅಭಿಪ್ರಾಯ ವ್ಯಕ ಮಾಡಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ಬೋಳಿಯಾರು ಗ್ರಾ.ಪಂ.ಅಧ್ಯಕ್ಷ ಸತೀಶ್ ಆಚಾರ್ಯ ಜಲಕದ ಕಟ್ಟೆ ಸಭೆ ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಬುದ್ಧ ಶಾಂತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ| ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ, ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಶಿವಪ್ರಸನ್ನ ಆಚಾರ್ಯ, ಪಂಚಾಯತ್ ರಾಜ್ ಕಿರಿಯ ಇಂಜಿನಿಯರ್ ಕೃಷ್ಣ ಪತ್ತಾರ್, ಗೋಲ್ಡ್‌ಸ್ಮಿತ್ ಅಕಾಡೆಮಿ ಸಿಇಒ ವಿವೇಕ್ ಆಚಾರ್ಯ, ಜೋತಿಷಿ, ವಾಸ್ತು ತಜ್ಞ ಬಿ. ಕೆ. ಮೋನಪ್ಪ ಆಚಾರ್ಯ, ಬಾಲಪ್ರತಿಭೆಯಲ್ಲಿ ಕ್ರೀಡಾಪಟು ಸೃಜನ್ ಆಚಾರ್ಯರಿಗೆ ಸಮ್ಮಾನಿಸಿ ಗೌರವಿಸಲಾಯಿತು.
ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಮನೋಜ್ ಆಚಾರ್ಯ ನಾಣ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪುಷ್ಪಾ ಡಿ.ಆಚಾರ್ಯ, ನಾರಾಯಣ ಆಚಾರ್ಯ ಕಳ್ಳಿಗೆ, ಲೋಕೇಶ್ ಆಚಾರ್ಯ ಪುಷ್ಪಲತಾ ಎಸ್.ಎಂ. ಜನಾರ್ದನ ಆಚಾರ್ಯ, ಕುರಿಯಾಳ ತಿಮ್ಮಪ್ಪ ಆಚಾರ್ಯ, ದೀಪಕ್ ಆಚಾರ್ಯ, ಜಯಚಂದ್ರ ಆಚಾರ್ಯ ಸರಪಾಡಿ, ಯಶೋಧರ ಆಚಾರ್ಯ ಅಲ್ಲಿಪಾದೆ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷರು ಸ್ವಾಗತಿಸಿ, ಸಂದೀಪ್ ಆಚಾರ್ಯ ಭಂಡಾರಿಬೆಟ್ಟು ಪ್ರಸ್ತಾವನೆ ನೀಡಿದರು. ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

More from the blog

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...